ಸಾಲಬಾಧೆ ತಾಳಲಾರದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಮಗಡ್ಡಿ(Muddamgaddi) ಗ್ರಾಮದಲ್ಲಿ ನಡೆದಿದೆ. ಚನ್ನಬಸಪ್ಪ, ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತ

ರಾಯಚೂರು (ಜು.4): ಸಾಲಬಾಧೆ ತಾಳಲಾರದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮುದ್ದಮಗಡ್ಡಿ(Muddamgaddi) ಗ್ರಾಮದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಚನ್ನಬಸಪ್ಪ, ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ರೈತ. ಕೃಷಿ ಇತರೆ ಕೆಲಸ ಕಾರ್ಯಕಗಳಿಗೆ 10ಲಕ್ಷ ರೂಪಾಯಿಗೂ ಅಧಿಕ ಸಾಲ ಮಾಡಿಕೊಂಡಿದ್ದ ಮೃತ ರೈತ. ಜಮೀನು ಒತ್ತೆ ಇಟ್ಟು 5 ಲಕ್ಷ ರೂಪಾಯಿ ಸಾಲ, ಮನೆ ನಿರ್ಮಾಣಕ್ಕೆ 4 ಲಕ್ಷ 80 ಸಾವಿರ ರೂಪಾಯಿ ಸಾಲ ಇದರ ಜೊತೆಗೆ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 1 ಲಕ್ಷ 34 ಸಾವಿರ ರೂಪಾಯಿ ಸಾಲ ಮಾಡಿಕೊಂಡಿದ್ದ ಮೃತ ರೈತ. ಬರಗಾಲ ಜೊತೆಗೆ ಬೆಳೆ ಇಲ್ಲದೇ ಸಾಲ ತೀರಿಸಲಾಗದೆ ಬೇಸತ್ತ ರೈತ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಸದ್ಯ ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.