Asianet Suvarna News Asianet Suvarna News

ರಾಣಿಬೆನ್ನೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ

* ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ಉದಗಟ್ಟಿ ಗ್ರಾಮದಲ್ಲಿ ನಡೆದ ಘಟನೆ
*  70 ಸಾವಿರ ಬೆಳೆ ಸಾಲ, ಖಾಸಗಿ ವ್ಯಕ್ತಿಗಳಿಂದ 3-4 ಲಕ್ಷ ಸಾಲ ಮಾಡಿಕೊಂಡಿದ್ದ ರೈತ
*  ಈ ಸಂಬಂಧ ರಾಣಿಬೆನ್ನೂರು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು
 

Farmer Committed Suicide at Ranibennur in Haveri grg
Author
Bengaluru, First Published Jul 24, 2021, 8:28 AM IST

ರಾಣಿಬೆನ್ನೂರು(ಜು.24): ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ತಾಲೂಕಿನ ಉದಗಟ್ಟಿ ಗ್ರಾಮದಲ್ಲಿ ಸಂಭವಿಸಿದೆ. 

ಗ್ರಾಮದ ವೀರೇಶ ಶಿವಾನಂದಪ್ಪ ಜ್ಯೋತಿ (35) ಮೃತ ರೈತ. ಇವರು ಕೃಷಿಗಾಗಿ ನಗರದ ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ 70 ಸಾವಿರ ಬೆಳೆ ಸಾಲ, ಖಾಸಗಿ ವ್ಯಕ್ತಿಗಳಿಂದ 3-4 ಲಕ್ಷ ಸಾಲ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಚಿಕ್ಕೋಡಿ: ಮೊಬೈಲ್‌ ಟವರ್‌ಗೆ ನೇಣು ಬಿಗಿದು ಆತ್ಮಹತ್ಯೆ

ಆದರೆ, ಕಳೆದ ಎರಡ್ಮೂರು ವರ್ಷಗಳಿಂದ ಸಮರ್ಪಕ ಬೆಳೆ ಬಾರದ ಕಾರಣ ಸಾಲ ತೀರಿಸುವ ಚಿಂತೆಯಿಂದ ಮನನೊಂದು ಮನೆಯ ಚಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow Us:
Download App:
  • android
  • ios