4 ಎಕರೆ ಜಮೀನಿನಲ್ಲಿ ಮುಂಗಾರು ಬೆಳೆ ಬರದೇ ನಷ್ಟ ಅನುಭವಿಸಿದ್ದ ರೈತ| ಮನೆಯಲ್ಲಿ ನೇಣಿಗೆ ಶರಣಾದ ರೈತ| ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ಗರಗ ಠಾಣೆಯಲ್ಲಿ ಪ್ರಕರಣ ದಾಖಲು|
ಧಾರವಾಡ(ಡಿ.28): ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ ವಿರಕ್ತಮಠದ ಓಣಿಯ ರೈತ ಜಗದೀಶ ಈರಯ್ಯ ಇಂಚಗೇರಿಮಠ (39) ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನ್ನ ಪಾಲಿಗೆ ಬಂದ 4 ಎಕರೆ ಜಮೀನಿನಲ್ಲಿ ಮುಂಗಾರು ಬೆಳೆ ಬರದೇ ನಷ್ಟ ಅನುಭವಿಸಿದ್ದ ಈರಯ್ಯ ಭಾನುವಾರ ನಸುಕಿನಲ್ಲಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಹಗರಿಬೊಮ್ಮನಹಳ್ಳಿ: ಗ್ರಾಮ ಪಂಚಾಯಿತಿ ಅಭ್ಯರ್ಥಿ ಆತ್ಮಹತ್ಯೆ
ಈರಯ್ಯ ಹೆಸರಿನಲ್ಲಿ 5 ಲಕ್ಷ ಗಳವರೆಗೆ ಸಾಲವಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 28, 2020, 3:21 PM IST