ಧಾರವಾಡ: ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ
4 ಎಕರೆ ಜಮೀನಿನಲ್ಲಿ ಮುಂಗಾರು ಬೆಳೆ ಬರದೇ ನಷ್ಟ ಅನುಭವಿಸಿದ್ದ ರೈತ| ಮನೆಯಲ್ಲಿ ನೇಣಿಗೆ ಶರಣಾದ ರೈತ| ಧಾರವಾಡ ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ಗರಗ ಠಾಣೆಯಲ್ಲಿ ಪ್ರಕರಣ ದಾಖಲು|
ಧಾರವಾಡ(ಡಿ.28): ತಾಲೂಕಿನ ಉಪ್ಪಿನಬೆಟಗೇರಿ ಗ್ರಾಮದ ವಿರಕ್ತಮಠದ ಓಣಿಯ ರೈತ ಜಗದೀಶ ಈರಯ್ಯ ಇಂಚಗೇರಿಮಠ (39) ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನ್ನ ಪಾಲಿಗೆ ಬಂದ 4 ಎಕರೆ ಜಮೀನಿನಲ್ಲಿ ಮುಂಗಾರು ಬೆಳೆ ಬರದೇ ನಷ್ಟ ಅನುಭವಿಸಿದ್ದ ಈರಯ್ಯ ಭಾನುವಾರ ನಸುಕಿನಲ್ಲಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಹಗರಿಬೊಮ್ಮನಹಳ್ಳಿ: ಗ್ರಾಮ ಪಂಚಾಯಿತಿ ಅಭ್ಯರ್ಥಿ ಆತ್ಮಹತ್ಯೆ
ಈರಯ್ಯ ಹೆಸರಿನಲ್ಲಿ 5 ಲಕ್ಷ ಗಳವರೆಗೆ ಸಾಲವಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಗರಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.