ಖಾಸಗಿ ಸಹಕಾರಿ ಬ್ಯಾಂಕಿನಿಂದ ಸಾಲ ಮರುಪಾವತಿ ಮಾಡುವಂತೆ ರೈತನಿಗೆ ನೋಟಿಸ್‌| ಧಾರವಾಡ ತಾಲೂಕಿನ ಕಮಲಾಪುರದಲ್ಲಿ ನಡೆದ ಘಟನೆ| ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಬೀರೇಶ್ವರ ಕೋ- ಆಪ್‌ ಸೊಸೈಟಿಯಲ್ಲಿ  ಸಾಲ ಮಾಡಿದ್ದ ರೈತ|

ಧಾರವಾಡ(ಫೆ.09): ಖಾಸಗಿ ಬ್ಯಾಂಕಿನಿಂದ ಸಾಲ ತುಂಬುವಂತೆ ನೋಟಿಸ್‌ ಬಂದ ಹಿನ್ನೆಲೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಮಲಾಪುರದಲ್ಲಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಹಾರುದ್ರಪ್ಪ ಕೋಟಿ (52) ಆತ್ಮಹತ್ಯೆ ಮಾಡಿಕೊಂಡ ರೈತ. ಖಾಸಗಿ ಸಹಕಾರಿ ಬ್ಯಾಂಕಿನಿಂದ ಸಾಲ ಮರುಪಾವತಿ ಮಾಡುವಂತೆ ಇತ್ತೀಚೆಗೆ ನೋಟಿಸ್‌ ಬಂದಿತ್ತು.

ಬಳ್ಳಾರಿ: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಸಚಿವೆ ಶಶಿಕಲಾ ಜೊಲ್ಲೆ ಒಡೆತನದ ಬೀರೇಶ್ವರ ಕೋ- ಆಪ್‌ ಸೊಸೈಟಿಯಲ್ಲಿ ಅವರು ಸಾಲ ಮಾಡಿದ್ದರು. ಅಲ್ಲಿಂದ ನೋಟಿಸ್‌ ಬಂದಿತ್ತು. ಇಲ್ಲಷ್ಟೇ ಅಲ್ಲದೇ, ವಿವಿಧೆಡ ಸುಮಾರು 5 ಲಕ್ಷ ಸಾಲ ಮಾಡಿದ್ದರು ಎಂದು ಹೇಳಲಾಗಿದೆ. ಊರ ಹೊರಗಿನ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.