ಥಣಿಸಂದ್ರದ ಸಮೀಪದ ಹೆಗಡೆ ನಗರದ ನಿವಾಸಿಗಳಾದ ಮೊಹಮ್ಮದ್ ಅಹ್ಮದ್ ಅಲಿಯಾಸ್ ಸಲ್ಮಾನ್, ಆತನ ತಂದೆ ಫಾರೂಕ್ ಹಾಗೂ ಮಂಗಮ್ಮನಪಾಳ್ಯದ ಶಾಜಿದ್ ಬಂಧಿತರಾಗಿದ್ದು, ಆರೋಪಿಗಳಿಂದ 30.40 ಲಕ್ಷ ಮೌಲ್ಯದ 93 ಮೊಬೈಲ್ ಜಪ್ತಿ ಮಾಡಲಾಗಿದೆ. 

ಬೆಂಗಳೂರು(ಫೆ.05): ನಗರದಲ್ಲಿ ಮೊಬೈಲ್ ಕಳ್ಳತನದಲ್ಲಿ ತೊಡಗಿದ್ದ ಅಪ್ಪ-ಮಗ ಸೇರಿ ಮೂವರನ್ನು ಮಹದೇವಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಥಣಿಸಂದ್ರದ ಸಮೀಪದ ಹೆಗಡೆ ನಗರದ ನಿವಾಸಿಗಳಾದ ಮೊಹಮ್ಮದ್ ಅಹ್ಮದ್ ಅಲಿಯಾಸ್ ಸಲ್ಮಾನ್, ಆತನ ತಂದೆ ಫಾರೂಕ್ ಹಾಗೂ ಮಂಗಮ್ಮನಪಾಳ್ಯದ ಶಾಜಿದ್ ಬಂಧಿತರಾಗಿದ್ದು, ಆರೋಪಿಗಳಿಂದ 30.40 ಲಕ್ಷ ಮೌಲ್ಯದ 93 ಮೊಬೈಲ್ ಜಪ್ತಿ ಮಾಡಲಾಗಿದೆ. ಈ ಕೃತ್ಯದಲ್ಲಿ ತಪ್ಪಿಸಿಕೊಂಡಿರುವ ಪ್ರಮುಖ ಆರೋಪಿ ಪಾದರಾ ಯನಪುರದ ಮೊಹಮ್ಮದ್ ಮುಸ್ತಾಕ್ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.

ಬೆಂಗಳೂರು: ಬಾಂಗ್ಲಾ ಮೇಲೆ ಅತ್ಯಾಚಾರ ನಡೆಸಿ ಹತ್ಯೆಗೈದಿದ್ದು ಟ್ಯಾಂಕರ್ ಚಾಲಕ!

ಕೆಲ ದಿನಗಳ ಹಿಂದೆ ಬಿ.ನಾರಾಯಣಪುರ ಸಮೀಪ ಖಾಸಗಿ ಕಂಪನಿ ಉದ್ಯೋಗಿಯೊಬ್ಬರಿಂದ ಕಿಡಿಗೇಡಿಗಳು ಮೊಬೈಲ್ ದೋಚಿದ್ದರು. ಈ ಬಗ್ಗೆ ತನಿಖೆಗಿಳಿದ ಇನ್ಸ್‌ಪೆಕ್ಟರ್‌ಜಿ.ಪ್ರವೀಣ್ ಬಾಬು ಹಾಗೂ ಸಬ್ ಇನ್ಸ್‌ಪೆಕ್ಟರ್‌ಪರಶುರಾಮ್ ನೇತೃತ್ವದ ತಂಡವು, ತಾಂತ್ರಿಕ ಮಾಹಿತಿ ಆಧರಿಸಿ ಮೂವರು ಮೊಬೈಲ್ ಕಳ್ಳರನ್ನು ಬಂಧಿಸಿದ್ದಾರೆ.

ಮೊಬೈಲ್ ಕದಿಯುವುದೇ ಕೆಲಸ: ಸಲ್ಮಾನ್, ಶಾಜಿದ್ ವೃತ್ತಿಪರ ಮೊಬೈಲ್ ಕಳ್ಳರಾಗಿದ್ದು, ಈ ಇಬ್ಬರ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಸಂಜೆ ವೇಳೆ ಕೆಲಸ ಮುಗಿಸಿ ಮನೆಗೆ ಹೋಗುವ ಧಾವಂತ ದಲ್ಲಿರುವ ಉದ್ಯೋಗಸ್ಥರನ್ನು ಗುರಿಯಾಗಿಸಿಕೊಂಡು ಆರೋಪಿಗಳು ಮೊಬೈಲ್ ದೋಚುತ್ತಿದ್ದರು. ರಸ್ತೆಯಲ್ಲಿ ಜನರು ಏಕಾಂಗಿಯಾಗಿ ಹೋಗುತ್ತಿದ್ದರೆ ಬೈಕ್‌ನಲ್ಲಿ ಹೋಗಿ ಮೊಬೈಲ್ ಎಗರಿಸಿ ಸಲ್ಮಾನ್ ಹಾಗೂ ಶಾಜಿದ್ ಪರಾರಿಯಾಗುತ್ತಿದ್ದರು. ಹೀಗೆ ಕದ್ದ ಮೊಬೈಲ್ ಗಳನ್ನು ತನ್ನ ತಂದೆ ಫಾರೂಕ್ ಮೂಲಕ ಸಲ್ಮಾನ್ ವಿಲೇವಾರಿ ಮಾಡಿಸುತ್ತಿದ್ದ.