ಮಂಗ್ಳೂರು: ದನ ಬಗ್ಗೆ ಜಗಳ, ಮಗನಿಗೆ ಬೆಂಕಿ ಹಚ್ಚಿದ ತಂದೆ
* ಮಂಗಳೂರಿನ ಜಪ್ಪಿನಮೊಗರಿನಲ್ಲಿ ನಡೆದ ಘಟನೆ
* ಸುಟ್ಟಗಾಯಗೊಂದಿಗೆ ಆಸ್ಪತ್ರೆಯಲ್ಲಿ ದಾಖಲಾದ ಸ್ವಾಮೀತ್ ಶೆಟ್ಟಿ
* ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು
ಮಂಗಳೂರು(ಜೂ.23): ಸಾಕು ದನಗಳನ್ನು ಹೊರಗಡೆ ಕಟ್ಟಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಗಿ ತಂದೆಯೇ ತನ್ನ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಂಗಳೂರಿನ ಜಪ್ಪಿನಮೊಗರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.
ಕೊಪ್ಪರಿಗೆಗುತ್ತು ನಿವಾಸಿ ಸ್ವಾಮೀತ್ ಶೆಟ್ಟಿ(25) ಎಂಬವರು ಸುಟ್ಟಗಾಯಗೊಂದಿಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆರೋಪಿ ವಿಶ್ವನಾಥ ಶೆಟ್ಟಿ(52) ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಹಿಂದಿನಿಂದ ಬಂದು ಕತ್ತಿಗೆ ಇರಿದ ಸ್ನೇಹಿತ, ಆಸ್ಪತ್ರೆಯಲ್ಲಿ ಸಿಪಾಯಿ
ಸೋಮವಾರ ರಾತ್ರಿ ಸುಮಾರು 11.30ರ ಸಮಾರಿಗೆ ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆಗುತ್ತು ಎಂಬಲ್ಲಿ ಸಾಕುದನಗಳನ್ನು ಹೊರಗಡೆ ಕಟ್ಟಿ ಹಾಕಿದ್ದ ಬಗ್ಗೆ ಸ್ವಾಮೀತ್ ಶೆಟ್ಟಿಯ ತಂದೆ ವಿಶ್ವನಾಥ ಶೆಟ್ಟಿರವರು ತಕರಾರು ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹೊಡೆದಿದ್ದರು. ಬಳಿಕ ಮನೆಯ ಒಳಗಡೆ ಬಂದು ಬಾಗಿಲು ಮುಚ್ಚಿ, ಚಿಲಕ ಹಾಕಿ ಪ್ಲಾಸ್ಟಿಕ್ ಕ್ಯಾನ್ನಲ್ಲಿದ್ದ ಪೆಟ್ರೊಲ್ನ್ನು ಮಗನ ಮೈ ಮೇಲೆ ಸುರಿದು ಅಲ್ಲೇ ಇದ್ದ ಸಿಗರ್ಲೈಟರ್ನಿಂದ ಬೆಂಕಿ ಹಚ್ಚಿದ್ದಾರೆ. ಸ್ವಾಮೀತ್ ಶೆಟ್ಟಿಗೆ ಶೇ.70ರಷ್ಟು ಸುಟ್ಟಗಾಯಗಳಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.