ಲಕ್ಷ್ಮೀದೇವಿ ನಗರದ ಪೇಂಟರ್ ಸ್ಯಾಮ್ಯುಯಲ್‌ ಆರೋಪ ಮಾಡಿದ್ದು, ಸಂತ್ರಸ್ತ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಅವರ ಬೆಂಬಲಿಗರಾದ ಸುರೇಶ್, ವಸಂತ್, ವಾಸೀಂ ಹಾಗೂ ಸೀನ ವಿರುದ್ಧ ಅಪಹರಣ ಆರೋಪದಡಿ ಎಫ್ ಐಆರ್‌ ದಾಖಲಿಸಿದ ಪೊಲೀಸರು

ಬೆಂಗಳೂರು(ಏ.04): ಬಿಜೆಪಿಗೆ ಕಾಂಗ್ರೆಸ್‌ ಕಾರ್ಯಕರ್ತನನ್ನು ಬೆದರಿಸಿ ಸೇರ್ಪಡೆಗೊಳಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಲಕ್ಷ್ಮೀದೇವಿ ನಗರದ ಪೇಂಟರ್ ಸ್ಯಾಮ್ಯುಯಲ್‌ ಆರೋಪ ಮಾಡಿದ್ದು, ಸಂತ್ರಸ್ತ ನೀಡಿದ ದೂರಿನ ಮೇರೆಗೆ ಮುನಿರತ್ನ ಹಾಗೂ ಅವರ ಬೆಂಬಲಿಗರಾದ ಸುರೇಶ್, ವಸಂತ್, ವಾಸೀಂ ಹಾಗೂ ಸೀನ ವಿರುದ್ಧ ಅಪಹರಣ ಆರೋಪದಡಿ ಪೊಲೀಸರು ಎಫ್ ಐಆರ್‌ ದಾಖಲಿಸಿದ್ದಾರೆ.

ದನದ ಮಾಂಸ ಮಾರಾಟಕ್ಕೆ ಅಡ್ಡಿಯಾಗುತ್ತದೆಂದು, ಆಸ್ಪತ್ರೆ ರಸ್ತೆಯನ್ನೇ ಒಡೆಸಿದ ಸಂಸದ ಡಿ.ಕೆ. ಸುರೇಶ್: ಮುನಿರತ್ನ ಆರೋಪ

ಎರಡು ದಿನಗಳಿಂದ ಮಾತನಾಡುವ ನೆಪದಲ್ಲಿ ಶಾಸಕ ಮುನಿರತ್ನ ಅವರ ಕಚೇರಿಗೆ ಬಲವಂತವಾಗಿ ಶಾಸಕರ ಹಿಂಬಾಲಕರು ಕರೆದು ಕೊಂಡುಹೋಗಿ ಬೆದರಿಕೆ ಹಾಕಿ ಬಿಜೆಪಿ ಸೇರಿಸಿದ್ದರು ಎಂ ದು ಸಂತ್ರಸ್ತ ಆರೋಪಿಸಿದ್ದಾರೆ. ಆದರೆ ತಮ್ಮ ಮೇಲಿನ ಆರೋಪವನ್ನು ಶಾಸಕ ಮುನಿರತ್ನ ನಿರಾಕರಿಸಿದ್ದಾರೆ.

ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕ ರ್ತನಾಗಿದ್ದೇನೆ. ಏ.1ರಂದು ಶಾಸಕ ಮುನಿರತ್ನ ಅವರು ಮಾತನಾಡಲು ಕರೆಯುತ್ತಿದ್ದಾರೆ ಎಂದು ಹೇಳಿ ಡಾ| ರಾಜ್ ಕುಮಾರ್‌ಸಮಾಧಿ ಬಳಿಗೆ ಸುರೇಶ್, ವಸಂತ್, ವಾಸೀಂ ಹಾಗೂ ಸೀನ ಕರೆಸಿಕೊಂಡರು. ಬಳಿಕ ಅಲ್ಲಿಂದ ವೈಯಾಲಿಕಾವಲ್‌ನಲ್ಲಿರುವ ಶಾಸಕರ ಕಚೇರಿಗೆ ನನ್ನನ್ನು ಕರೆದುಕೊಂಡು ಹೋದರು. ಅಲ್ಲಿ ನನಗೆ ಶಾಸಕ ಮುನಿರತ್ನ ಜೀವ ಬೆದರಿಕೆ ಹಾಕಿದರು ಎಂದು ಸಾಮ್ಯುಯಲ್ ದೂರಿದ್ದಾರೆ.

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿ ರೂಪದಲ್ಲಿ ಹಣ ಪೋಲು: ಮುನಿರತ್ನ ಆರೋಪ

ಸ್ವಯಂಪ್ರೇರಿತನಾಗಿ ಬಿಜೆಪಿ ಸೇರಿದ್ದ: ಮುನಿರತ್ನ ಸ್ಪಷ್ಟನೆ

ನರೇಂದ್ರ ಮೋದಿ ಅವರು ಮತ್ತೆ ಪ್ರಧಾನಿಮಂತ್ರಿ ಆಗಬೇಕು ಹಾಗೂ ಡಾ| ಸಿ.ಎನ್.ಮಂಜುನಾಥ್ ಅವರು ಸಂಸದರಾಗಬೇಕು ಎಂದು ಹೇಳಿ ಸ್ವಯಂ ಬಿಜೆಪಿ ಸೇರಿದ ವ್ಯಕ್ತಿ ಈಗ ನನ್ನ ಮೇಲೆ ಸುಳ್ಳು ಆರೋಪ ಮಾಡಿದ್ದಾನೆ ಎಂದು ಮಾಜಿ ಸಚಿವ ಮುನಿರತ್ನ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದರೂ ಪಕ್ಷಕ್ಕೆ ಸೇರುತ್ತೇನೆ ಎಂದಾಗ ಸೇರಿಸಿಕೊಳ್ಳುವುದು ನಮ್ಮ ಧರ್ಮ. ಬಿಜೆಪಿ ಸೇರಿದ ಬಳಿಕ ಕಾಂಗ್ರೆಸ್ ಜಿಲ್ಲಾಧ್ಯಕ್ಷಹನುಮಂತರಾ ಯಪ್ಪನನ್ನು ಭೇಟಿಯಾಗಿದ್ದ. ನಂದಿನಿ ಲೇಔಟ್ ಪೊಲೀಸರು ಯಾವುದೇ ತನಿಖೆ ನಡೆಸದೆ ಎಫ್‌ಐ ಆ‌ದಾಖಲು ಮಾಡಿ ದ್ದಾರೆ. ನಾನು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡದಂತೆ ತಡೆಯಲು ಈ ಕುತಂತ್ರ ಮಾಡಿದ್ದಾರೆ. ಈ ರೀತಿ ಬೆದರಿಕೆ ತಂತ್ರಗಾರಿಕೆ ಮೊದಲು ಕನಕಪುರದಲ್ಲಿ ಮಾಡುತ್ತಿದ್ದರು ಎಂದು ಟೀಕಿಸಿದರು.