ಶಿವಮೊಗ್ಗ ಜಿಲ್ಲೆಯಲ್ಲಿ ಒಂದಲ್ಲ ಒಂದು ಘಟನೆಗಳು ನಡೆಯುತ್ತಲೇ ಇವೆ. ಹಿಜಾಬ್ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ನಡೆದಿತ್ತು. ಇದೀಗ ವಿಚಾರಣಾಧೀನ ಕೈದಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜೈಲು ಅಧೀಕ್ಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

ಶಿವಮೊಗ್ಗ, (ಮಾ.08): ಶಿವಮೊಗ್ಗ ಜಿಲ್ಲೆಯಲ್ಲಿ ಒಂದಲ್ಲ ಒಂದು ಘಟನೆಗಳು ನಡೆಯುತ್ತಲೇ ಇವೆ. ಹಿಜಾಬ್ ಬೆನ್ನಲ್ಲೇ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ನಡೆದಿತ್ತು. ಇದೀಗ ವಿಚಾರಣಾಧೀನ ಕೈದಿಗಳ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜೈಲು ಅಧೀಕ್ಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 

ವ್ಯಕ್ತಿಯ ಮೇಲೆ ಅನ್ಯಕೋಮಿನಿಂದ ಹಲ್ಲೆ: ಶಿವ​ಮೊ​ಗ್ಗ​ದಲ್ಲಿ ಮತ್ತೆ ಆತಂಕ

ಕೈದಿಗಳಿಂದಲೇ ಶಿವಮೊಗ್ಗ ಜೈಲು ಅಧೀಕ್ಷಕ ಮಹೇಶ್ ಜಿಗಣಿ ವಿರುದ್ಧ ದೂರು ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಮಹೇಶ್ ಜಿಗಣಿ ಕೇಸ್‌ ಬುಕ್‌ ಆಗಿದೆ. ಅಲ್ಲದೇ ಮಹೇಶ್ ಜಿಗಣಿ ಅವರನ್ನ ಶಿವಮೊಗ್ಗ ಜೈಲು ಅಧೀಕ್ಷಕ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ.