Asianet Suvarna News Asianet Suvarna News

ಯುಗಾದಿ ಹಬ್ಬದಂದು ಕರಾವಳಿಯಲ್ಲಿ ದೋಣಿ ದುರಂತ!

ಯಗಾದಿ ಹಬ್ಬದಂದೇ ಕರಾವಳಿ ಭಾಗದಲ್ಲಿ ಭಾರೀ ದುರಂತ ಸಂಭವಿಸಿದೆ. ನೂರಾರು ಕಿ.ಮೀ ದೂರದ ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕಾ ಬೋಟ್‌‌ ಅಪಘಾತವಾಗಿದೆ.

fishing boat sunk in mangaluru sea 12 fishermen missing rbj
Author
Bengaluru, First Published Apr 13, 2021, 3:15 PM IST

ಮಂಗಳೂರು, (ಏ.13):  ಕರಾವಳಿಯ ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕಾ ಬೋಟ್‌ ಅಪಘಾತವಾಗಿದ್ದು, ಇಬ್ಬರು ಮೀನುಗಾರರು ಮೃತಪಟ್ಟಿದ್ದಾರೆ. 12 ಮಂದಿ ನಾಪತ್ತೆಯಾಗಿದ್ದಾರೆ.

ಮಂಗಳೂರು ಬಂದರಿನಿಂದ 43 ನಾಟೆಕಲ್‌ ಮೈಲಿ ದೂರದಲ್ಲಿ ಈ ಘಟನೆ ನಡೆದಿದೆ. ತಮಿಳುನಾಡು ಹಾಗೂ ಬಂಗಾಳದ ಕಾರ್ಮಿಕರಿದ್ದ ಮೀನುಗಾರಿಕಾ ಬೋಟ್‌ ಕೇರಳದ ಕೋಯಿಕ್ಕೋಡ್‌ ಜಿಲ್ಲೆಯ ಬೇಪೋರ್‌ನಿಂದ ಹೊರಟಿದ್ದು, ಮಂಗಳೂರು ಬಂದರಿನಿಂದ ನೂರಾರು ಕಿ.ಮೀ ದೂರದ ಆಳ ಸಮುದ್ರದಲ್ಲಿ ಹಡಗು ಹಾಗೂ ಮೀನುಗಾರಿಕಾ ಬೋಟ್‌‌ ಅಪಘಾತವಾಗಿದೆ.

ದೋಣಿ ಮಗುಚಿ 6 ಮಂದಿ ಕಾಣೆ : ಇಬ್ಬರ ಮೃತ​ದೇಹ ಪತ್ತೆ

ಕರಾವಳಿ‌ ಕಾವಲು ಪಡೆಯ ಮೂರು ಹಡಗು ಹಾಗೂ ಏರ್‌‌ ಕ್ರಾಫ್ಟ್‌ ಮೂಲಕ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದು, ನಾಪತ್ತೆಯಾದವರಿಗೆ ಶೋಧ ಕಾರ್ಯ ಮುಂದುವರೆದಿದೆ.

ಈ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದ್ದು, ಕರಾವಳಿ ಪಡೆಯ ಮೂರು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಮೀನುಗಾರಿಕಾ ಬೋಟ್ ಕೇರಳದ ಕೋಝಿಕೋಡ್ ಜಿಲ್ಲೆಯ ಬೇಪೋರ್ ನಿಂದ ಹೊರಟಿತ್ತು. ಇದರಲ್ಲಿ ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದರು ಎನ್ನಲಾಗಿದೆ.

Follow Us:
Download App:
  • android
  • ios