*ಊಬರ್ ಬುಕ್ ಮಾಡಿ ಚಾಲಕನನ್ನ ಕರೆಸಿಕೊಂಡು ದರೋಡೆ ಮಾಡಿದ್ದ ಆರೋಪಿಗಳು*ಚಾಲಕನಿಗೆ ಮಾರಕಾಸ್ತ್ರಗಳನ್ನ ತೋರಿಸಿ ಹಣ, ಮೊಬೈಲ್, ಕಾರು ಕಿತ್ತುಕೊಂಡಿದ್ದ ಆರೋಪಿಗಳು*ಪ್ರಕರಣ ಸಂಬಂಧ ನಾಲ್ವರನ್ನ ಬಂಧಿಸಿದ ಸಂಪಿಗೇಹಳ್ಳಿ ಪೊಲೀಸರು

ಬೆಂಗಳೂರು (ಏ. 16): ಡಿಫ್ರೆಂಟಾಗಿ ದರೋಡೆ ಮಾಡುತ್ತಿದ್ದ ಆರೋಪಿಗಳನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಊಬರ್ ಕ್ಯಾಬ್ (Cab) ಬುಕ್ ಮಾಡಿ ಚಾಲಕನನ್ನ ಕರೆಸಿಕೊಂಡು ಆರೋಪಿಗಳು ದರೋಡೆ ಮಾಡಿದ್ದರು. ಕ್ಯಾಬ್ ಕರೆಸಿಕೊಂಡು ಚಾಲಕನಿಗೆ ಮಾರಕಾಸ್ತ್ರಗಳನ್ನ ತೋರಿಸಿ ಹಣ, ಮೊಬೈಲ್, ಕಾರನ್ನು ಆರೋಪಿಗಳು ಕಿತ್ತುಕೊಂಡಿದ್ದರು. ಪ್ರಕರಣ ಸಂಬಂಧ ನಾಲ್ವರನ್ನ ಸಂಪಿಗೇಹಳ್ಳಿ ಪೊಲೀಸರು (sampigehalli Police) ಬಂಧಿಸಿದ್ದಾರೆ. ಹೃತಿಕ್ ಗೌಡ (20), ನಿತಿನ್ ಗೌಡ (21), ಸುಮಂತ್ (20), ದರ್ಶನ್ (20) ಬಂಧಿತ ಆರೋಪಿಗಳು

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಂಧಿತರಿಂದ 5ಲಕ್ಷ ಮೌಲ್ಯದ ಕಾರು, ಒಂದು ಬೈಕ್, ಒಂದು ಮೊಬೈಲ್ ಹಾಗೂ 18 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ಬೆಳ್ಳಂದೂರು, ಹನುಮಂತ ನಗರ, ಹಾಸನದ ಕೊಣನೂರು ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಆರೋಪಿಗಳು ಕೈ ಚಳಕ ತೋರಿಸಿದ್ದಾರೆ. ಸದ್ಯ ಆರೋಪಿಗಳನ್ನ ಬಂಧಿಸಿರುವ ಸಂಪಿಗೇಹಳ್ಳಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

ಇದನ್ನೂ ಓದಿ: ಭಾರೀ ಚಿನ್ನ, ಹಣದ ದುರಾಸೆಯಿಂದ ನಿವೃತ್ತ ಯೋಧನ ಹತ್ಯೆ, ಹಂತಕರಿಗೆ ಸಿಕ್ಕಿದ್ದು ಪುಡಿಗಾಸು!

ಆಟೋದಲ್ಲಿ ಹಿಂಬಾಲಿಸಿ ದರೋಡೆ ಮಾಡುತ್ತಿದ್ದ ಖದೀಮರ ಸೆರೆ: ಆಟೋದಲ್ಲಿ ಹಿಂಬಾಲಿಸಿ ನಡೆದು ಹೋಗುವವರನ್ನು ಅಡ್ಡಗಟ್ಟಿ ದರೋಡೆ(Robbery) ಮಾಡುತ್ತಿದ್ದ ಇಬ್ಬರು ಕುಖ್ಯಾತ ದರೋಡೆಕೋರರನ್ನು ಸಂಪಿಗೆಹಳ್ಳಿ ಠಾಣೆ ಪೊಲೀಸರು(Police) ಬಂಧಿಸಿದ್ದಾರೆ. ಶಿವಾಜಿನಗರ ಮಹಮ್ಮದ್‌ ಅರ್ಬಾಜ್‌(24) ಮತ್ತು ಥಣಿಸಂದ್ರದ ಸೈಯದ್‌ ಅರ್ಬಾಜ್‌(24) ಬಂಧಿತರು(Arrest). ಆರೋಪಿಗಳಿಂದ(Accused) ಚಿನ್ನದ ಸರ, ಬೆಳ್ಳಿಯ ಸರ, ಒಂದು ಮೊಬೈಲ್‌, ಕೃತ್ಯಕ್ಕೆ ಬಳಸಿದ್ದ ಆಟೋರಿಕ್ಷಾ ಸೇರಿದಂತೆ ಒಟ್ಟು 2.15 ಲಕ್ಷ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ.

ಮಾ.3ರಂದು ಅಮರಜ್ಯೋತಿ ಲೇಔಟ್‌ನ ಮುಖ್ಯರಸ್ತೆಯಲ್ಲಿ ರಾತ್ರಿ 8.15ರ ಸುಮಾರಿಗೆ ಅಜಿತ್‌ ಎಂಬುವವರು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಆಟೋರಿಕ್ಷಾದಲ್ಲಿ ಬಂದಿರುವ ಆರೋಪಿಗಳು, ಅಜಿತ್‌ ಅವರಿಂದ ಚಿನ್ನ ಹಾಗೂ ಬೆಳ್ಳಿಯ ಸರ ಕಿತ್ತುಕೊಂಡು ಪರಾರಿಯಾಗಿದ್ದರು. ಈ ಸಂಬಂಧ ದಾಖಲಾಗಿದ್ದ ದೂರಿನ ಮೇರೆಗೆ ಕಾರ್ಯಾಚರಣೆ ಕೈಗೊಂಡು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.