ಬೆಂಗಳೂರು ಪೊಲೀಸರಿಗೆ ಶಾಕ್/ 10 ನೇ ತರಗತಿ ಓದುತ್ತಿದ್ದ ನಾಲ್ವರು ಮಕ್ಕಳು ನಾಪತ್ತೆ/ ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಘಟನೆ

ಬೆಂಗಳೂರು(ಡಿ. 26)  ಬೆಂಗಳೂರಿನಲ್ಲಿ ನಾಲ್ವರು ವಿದ್ಯಾರ್ಥಿಗಳು ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ತರುಣ್ (16), ಸೃಜನ್ (16), ಗೋಕುಲ್ ಆದಿತ್ಯ (16) ಹಾಗೂ ಸಿಂಹಾದ್ರಿ (17)ನಾಪತ್ತೆಯಾದವರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಸಾಜ್ ಪಾರ್ಲರ್ ರೇಡ್: ಸಿಕ್ಕಿ ಬಿದ್ದ ಪೊಲೀಸರು!

ನಾಪತ್ತೆಯಾದವರು ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯ ಸಿಂಗಸಂದ್ರದವರು. ಎಸ್ಎಸ್ಎಲ್ ಸಿ ಓದುತ್ತಿದ್ದ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ.

ಮೊನ್ನೆ(ಮಂಗಳವಾರ)ಯಿಂದ ನಾಪತ್ತೆಯಾಗಿರುವ ನಾಲ್ವರ ಸಂಬಂಧ ಪೋಷಕರು ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.