Asianet Suvarna News Asianet Suvarna News

ಹಾಸನದ ಪುಡಿ ರೌಡಿಗಳಿಂದ ಯುವಕನ ಹತ್ಯೆ ಪ್ರಕರಣ; ಬಂಧಿಸಲು ತೆರಳಿದ್ದ ಪೊಲೀಸರ ಮೇಲೆಯೇ ಅಟ್ಯಾಕ್!

ಯುವಕನ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ವೇಳೆ ರೌಡಿಗಳು ಪೊಲೀಸರ ಮೇಲೆಯೇ ಅಟ್ಯಾಕ್ ಮಾಡಿದ ಘಟನೆ ಹಾಸನ ತಾಲೂಕಿನ ಕುಂತಿಬೆಟ್ಟದಲ್ಲಿ ನಡೆದಿದೆ.

Hassan youth murder case attack on the police by rowdies while arrest rav
Author
First Published Jul 29, 2024, 11:18 PM IST | Last Updated Jul 30, 2024, 9:52 AM IST

ಹಾಸನ (ಜು.29) ಯುವಕನ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಲು ಹೋಗಿದ್ದ ವೇಳೆ ರೌಡಿಗಳು ಪೊಲೀಸರ ಮೇಲೆಯೇ ಅಟ್ಯಾಕ್ ಮಾಡಿದ ಘಟನೆ ಹಾಸನ ತಾಲೂಕಿನ ಕುಂತಿಬೆಟ್ಟದಲ್ಲಿ ನಡೆದಿದೆ.

ಕೊಲೆ ಆರೋಪಿ ರಾಜು, ಪೊಲೀಸರ ಮೇಲೆ ಅಟ್ಯಾಕ್ ಮಾಡಿದ ಪಾತಕಿ. ಈ ವೇಳೆ ಪ್ರಾಣ ರಕ್ಷಣೆಗಾಗಿ  ಆರೋಪಿ ರಾಜು ಮೇಲೆ ಫೈರಿಂಗ್ ಮಾಡಿದ ಪೊಲೀಸರು. ಕಾಲಿಗೆ ಗುಂಡು ಹಾರಿಸುತ್ತಿದ್ದಂತೆ ಕುಸಿದುಬಿದ್ದ ರೌಡಿ. ಬಳಿಕ ಆರೋಪಿಯನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಿದ ಪೊಲೀಸರು. ಅದಾಗಲೇ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದ ಆರೋಪಿ ರಾಜು. ಮತ್ತೆ ಪಾತಕ ಕೃತ್ಯ ಮುಂದುವರಿಸಿದ್ದ.

ಚಲಿಸುತ್ತಿದ್ದ ಬಸ್‌ನಿಂದ ವಿದ್ಯಾರ್ಥಿ ಬಿದ್ದ ಪ್ರಕರಣ; ಚಿಕಿತ್ಸೆ ಫಲಿಸದೇ ಸಾವು!

ಇಂದು ಬೆಳಗ್ಗೆ ಹಾಸನ ಹೊರವಲಯದ ಕೌಶಿಕ್ ಗೇಟ್ ಬಳಿ ನಂದಿನಿ ಪಾರ್ಲರ್ ನಡೆಸುತ್ತಿದ್ದ ಸತೀಶ್ ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದ ರಾಜು ಅಂಡ್ ಗ್ಯಾಂಗ್. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಸತೀಶ್ ಹಾಸನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಫಲಿಸದೇ ಮೃತಪಟ್ಟಿರುವ ಯುವಕ. ಈ ಪ್ರಕರಣದಲ್ಲಿ ಆರೋಪಿಗಳನ್ನ ಬಂಧಿಸಲು ತೆರಳಿದ್ದ ಪೊಲೀಸರ ಮೇಲೂ ಅಟ್ಯಾಕ್ ಮಾಡಿದ್ದ ದುಷ್ಕರ್ಮಿಗಳು!

ಹಾಸನ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಘಟನೆ

Latest Videos
Follow Us:
Download App:
  • android
  • ios