ಹಾವೇರಿ ಜಿಲ್ಲೆಯ ಮರೋಳ ಗ್ರಾಮದಲ್ಲಿ, ಪರೀಕ್ಷೆಯ ಒತ್ತಡ ಮತ್ತು ಪೋಷಕರ ಬುದ್ಧಿಮಾತಿನಿಂದ ಮನನೊಂದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮ೧ಹತ್ಯೆ ಮಾಡಿಕೊಂಡಿದ್ದಾಳೆ. ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.

ಹಾವೇರಿ (ಫೆ.11): ಪರೀಕ್ಷೆಯ ಒತ್ತಡ, ಪೋಷಕರ ಹಿತನುಡಿಯನ್ನೇ ತಪ್ಪಾಗಿ ಭಾವಿಸಿದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮ೧ಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜಿಲ್ಲೆಯ ಮರೋಳ ಗ್ರಾಮದಲ್ಲಿ ನಡೆದಿದೆ. ನಿಂಗಮ್ಮ ಬಾಲಣ್ಣನವರ (16) ಮೃತಪಟ್ಟ ದುರ್ದೈವಿ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಪೋಷಕರ ಬುದ್ಧಿಮಾತಿಗೆ ಮನನೊಂದ ಬಾಲಕಿ

ಮೃತ ಬಾಲಕಿ ಸ್ಥಳೀಯ ಸರ್ಕಾರಿ ಪ್ರೌಢ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು. ವಾರ್ಷಿಕ ಪರೀಕ್ಷೆಗಳು ಹತ್ತಿರ ಬರುತ್ತಿವೆ, ಸಮಯ ವ್ಯರ್ಥ ಮಾಡದೆ ಸರಿಯಾಗಿ ಓದಿಕೊ ಎಂದು ಪೋಷಕರು ಬುದ್ಧಿ ಹೇಳಿದ್ದರು ಎನ್ನಲಾಗಿದೆ. ಪೋಷಕರು ಪದೇ ಪದೆ ಓದಿನ ಬಗ್ಗೆ ಒತ್ತಡ ಹೇರಿದ್ದರಿಂದ ಮನನೊಂದ ಬಾಲಕಿ, ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲೇ ವಿಷ ಸೇವಿಸಿದ್ದಾಳೆ.

ಚಿಕಿತ್ಸೆ ಫಲಿಸದೆ ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ಸಾವು

ವಿಷ ಸೇವಿಸಿದ ಬಾಲಕಿಯನ್ನು ಗಮನಿಸಿದ ಕುಟುಂಬಸ್ಥರು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದರು. ನಂತರ ಪರಿಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಯಿತು. ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಗಮನಿಸಿ:

ಜಗತ್ತಿನಲ್ಲಿ ಪರಿಹಾರವಿಲ್ಲದ ಸಮಸ್ಯೆಗಳಿಲ್ಲ. ದುಡುಕಿನಿಂದ ಆ8ಹತ್ಯೆಯ ನಿರ್ಧಾರ ತೆಗೆದುಕೊಳ್ಳುವುದರಿಂದ ಸಮಸ್ಯೆಗೆ ಯಾವುದೇ ಪರಿಹಾರ ಸಿಗಲ್ಲ. ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ಸ್ವಯಂಹಾನಿ ಮಾಡಿಕೊಳ್ಳುವ ಯೋಚನೆ/ಮನೋವ್ಯಥೆ ಅನುಭವಿಸುತ್ತಿದ್ದರೆ ಅಥವಾ ಸಂಕಷ್ಟದ ಸ್ಥಿತಿಯಲ್ಲಿದ್ದರೆ, ದಯವಿಟ್ಟು ಯಾರೊಂದಿಗಾದರೂ ಮಾತನಾಡಿ, ಅದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗುವುದು. ಕರ್ನಾಟಕದಲ್ಲಿ ಸಹಾಯ ಮತ್ತು ಸಮಾಲೋಚನೆಗಾಗಿ ಕೆಳಗಿನ ಸೇವೆಗಳು ಲಭ್ಯವಿವೆ: 24×7 ಮಾನಸಿಕ ಆರೋಗ್ಯ ಸಹಾಯವಾಣಿ ಟೆಲಿ-ಮಾನಸ್ (Tele-MANAS): 14416 ಅಥವಾ 1800-89-14416 (ರಾಷ್ಟ್ರೀಯ ಟೆಲಿ-ಮಾನಸಿಕ ಆರೋಗ್ಯ ಸೇವೆ). ಇದೆ ಸಂಪರ್ಕಿಸಿ.

YouTube video player