ಸಲಿಂಗಕಾಮ ಪ್ರಕರಣದಲ್ಲಿ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಂಎಲ್‌ಸಿ ಡಾ.ಸೂರಜ್ ರೇವಣ್ಣ ಪರವಾಗಿ ಜೂ.21 ರಂದು ದೂರು ನೀಡಿದ್ದ ಸೂರಜ್ ಆಪ್ತ ಶಿವಕುಮಾ‌ರ್ ಈಗ ಉಲ್ಟಾ ಹೊಡೆದಿದ್ದಾರೆ. ಮಂಗಳವಾರ ಸಂಜೆ ಡಾ.ಸೂರಜ್ ರೇವಣ್ಣ ವಿರುದ್ಧವೇ ಅವರು ದೂರು ನೀಡಿದ್ದು, ಸೂರಜ್‌ರಿಂದ ತನ್ನ ಮೇಲೂ 3 ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿದ್ದಾರೆ. 

ಹೊಳೆನರಸೀಪುರ/ಹಾಸನ(ಜೂ.26):  ಜೆಡಿಎಸ್ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಸಲಿಂಗಕಾಮ ದೌರ್ಜನ್ಯಕ್ಕೆ ಸಂಬಂಧಿಸಿ ದಂತೆ ಈಗ 2ನೇ ದೂರು ದಾಖಲಾಗಿದೆ. ಅವರ ಆಪ್ತನೇ ತನ್ನ ಮೇಲೆ ಮೂರು ವರ್ಷದಿಂದ ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ದೂರು ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸಲಿಂಗಕಾಮ ಪ್ರಕರಣದಲ್ಲಿ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಂಎಲ್‌ಸಿ ಡಾ.ಸೂರಜ್ ರೇವಣ್ಣ ಪರವಾಗಿ ಜೂ.21 ರಂದು ದೂರು ನೀಡಿದ್ದ ಸೂರಜ್ ಆಪ್ತ ಶಿವಕುಮಾ‌ರ್ ಈಗ ಉಲ್ಟಾ ಹೊಡೆದಿದ್ದಾರೆ. ಮಂಗಳವಾರ ಸಂಜೆ ಡಾ.ಸೂರಜ್ ರೇವಣ್ಣ ವಿರುದ್ಧವೇ ಅವರು ದೂರು ನೀಡಿದ್ದು, ಸೂರಜ್‌ರಿಂದ ತನ್ನ ಮೇಲೂ 3 ವರ್ಷಗಳ ಹಿಂದೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಆರೋಪಿಸಿದ್ದಾರೆ. ಹೀಗಾಗಿ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿರುವ ಸೂರಜ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಏನಿದು ಸೂರಜ್ ರೇವಣ್ಣನ ಕಾಮ ಪುರಾಣ..? ತಮ್ಮ ಹಂಗೆ..ಅಣ್ಣ ಹಿಂಗೆ..! ರೇವಣ್ಣ ಕುಟುಂಬ ವಿಲವಿಲ!

ಜೂ.21ರಂದು ಸೂರಜ್ ಪರ, ಅರಕಲಗೂಡು ಯುವಕನ ವಿರುದ್ಧ ದೂರು ದಾಖಲಿಸಿದ್ದ ಹನುಮನಹಳ್ಳಿಯ ಶಿವಕುಮಾರ್, 'ದೂರುದಾರ ನನ್ನ ಮೂಲಕ ನಮ್ಮ ನಾಯಕ ಎಂಎಲ್‌ಸಿ ಡಾ.ಸೂರಜ್‌ ರಿಗೆ 5 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ. ಹಣ ಕೊಡದಿದ್ದರೆ ಸೂರಜ್ ವಿರುದ್ಧ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ದೂರು ದಾಖಲಿಸುವುದಾಗಿ ಬೆದರಿಕೆ ಹಾಕಿದ್ದ' ಎಂದು ಆರೋಪಿಸಿದ್ದರು.

ಈಗ, ಮಂಗಳವಾರ ಹೊಳೆನರಸೀಪುರ ನಗರ ಠಾಣೆಗೆ ಆಗಮಿಸಿದ ಶಿವಕುಮಾ‌ರ್ ಅವರು ಸೂರಜ್ ವಿರುದ್ದವೇ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.

Suraj Revanna sexual abuse case: ಸೂರಜ್ ರೇವಣ್ಣ ಕಸ್ಟಡಿಗೆ ಪಡೆಯಲು ಕೋರ್ಟ್‌ಗೆ CID ನೀಡಿದ ಕಾರಣಗಳೇನು..?

ದೂರಿನಲ್ಲಿ ಏನಿದೆ?

ನಾಲ್ಕು ದಿನಗಳ ಹಿಂದೆ ದೂರುದಾರನ ವಿರುದ್ಧ ದೂರು ನೀಡಲು ನನಗೆ ಒತ್ತಡ ವಿತ್ತು. ಸೂರಜ್ ಒತ್ತಡಕ್ಕೆ ಮಣಿದು ಅಂದು ದೂರು ನೀಡಿದ್ದೆ. ನನಗೆ ಬೆದರಿಕೆ ಹಾಕಿ ದೂರು ಕೊಡಿಸಿದ್ದರು. 3 ವರ್ಷಗಳ ಹಿಂದೆ ಗನ್ನಿಕಡ ತೋಟದ ಮನೆಯಲ್ಲಿ ಸೂರಜ್ ನನ್ನ ಮೇಲೂ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಶಿವಕುಮಾರ್ ದೂರಿನಲ್ಲಿ ಹೇಳಿದ್ದಾರೆ.

4 ದಿನ ಎಲ್ಲಿದ್ದರು?

ಜೂ.21ರಂದು ಸೂರಜ್ ಪರ, ಅರಕಲ ಗೂಡು ಯುವಕನ ವಿರುದ್ದ ದೂರು ದಾಖಲಿಸಿದ್ದ ಶಿವಕುಮಾರ್, ಬಳಿಕ ನಾಪತ್ತೆಯಾಗಿದ್ದರು. ಅವರು ಗೌಪ್ಯ ಸ್ಥಳಕ್ಕೆ ತೆರಳಿದ್ದು, ಜೂ.25ರಂದು ಹೊರಬಂದು ಸೂರಜ್‌ ವಿರುದ್ಧದೂರುದಾಖಲಿಸಿದ್ದಾರೆ. ಸೂರಜ್ ಕುಟುಂಬದ ಮೇಲಿನ ಭಯ, ಬೆದರಿಕೆ ಬರುವ ಸಾಧ್ಯತೆ ಹಿನ್ನೆಲೆ ಅವರು ನಾಪತ್ತೆಯಾಗಿದ್ದರು ಎನ್ನಲಾಗಿದೆ.