ರವಿ ಹೋತಪೇಟೆ ಆತ್ಮಹತ್ಯೆಗೆ ಶರಣಾದ ವ್ಯಕ್ತಿ| ಗೊಂಬೆಗಳಿಗೆ ಆಭರಣಗಳನ್ನು ಪೂರೈಸುವ ವ್ಯಾಪಾರ ಮಾಡುತ್ತಿದ್ದರ ಮೃತ ರವಿ| ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ| 

ಹುಬ್ಬಳ್ಳಿ(ಫೆ.25): ಇಲ್ಲಿನ ವ್ಯಕ್ತಿಯೊಬ್ಬರು ಕೊಲ್ಲಾಪುರದ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ವೀರಾಪುರ ಓಣಿಯ ನಿವಾಸಿ ರವಿ ಹೋತಪೇಟೆ ಎಂಬುವವರೇ ಆತ್ಮಹತ್ಯೆಗೆ ಶರಣಾದವರು. 

Add Asianetnews Kannada as a Preferred SourcegooglePreferred

ರವಿ ಹೋತಪೇಟೆ ಗೊಂಬೆಗಳಿಗೆ ಆಭರಣಗಳನ್ನು ಪೂರೈಸುವ ವ್ಯಾಪಾರ ಮಾಡುತ್ತಿದ್ದರು. ಆಭರಣಗಳನ್ನು ತರುವುದಾಗಿ ಕೊಲ್ಲಾಪುರಕ್ಕೆ ತೆರಳಿದ್ದರು. ಇದೇ ವೇಳೆ ತಂಗಿದ್ದ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಬಾಗಲಕೋಟೆ: MBBS ವಿದ್ಯಾರ್ಥಿನಿ ನೇಣಿಗೆ ಶರಣು, ಕಾರಣ..?

ಅಯ್ಯಪ್ಪ ಮಾಲಾಧಾರಿಗಳಿಗೆ ಗುರುಸ್ವಾಮಿಯಾಗಿದ್ದರು ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕೊಲ್ಲಾಪುರ ಠಾಣೆಯ ಪೊಲೀಸರು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದು, ಸಂಬಂಧಿಗಳು ಕೊಲ್ಲಾಪುರಕ್ಕೆ ತೆರಳಿದ್ದಾರೆ.