Asianet Suvarna News Asianet Suvarna News

Belagavi Crime: ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ತಿಳಿದು ಪತಿ ಆತ್ಮಹತ್ಯೆ!

*  ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದಲ್ಲಿ ನಡೆದ ಘಟನೆ 
*  ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಆತ್ಮಹತ್ಯೆ ಮಾಡಿಕೊಂಡ ಯುವಕ
*  ಈ ಸಂಬಂಧ ಮೂಡಲಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು 
 

Husband Committed Suicide After Beaten Wife in Belagavi
Author
Bengaluru, First Published Jun 2, 2022, 9:25 AM IST

ಮೂಡಲಗಿ(ಜೂ.02): ಜಗಳದ ಮಧ್ಯೆ ಪತಿ ಪತ್ನಿಗೆ ಹೊಡೆದಿದ್ದಾನೆ. ಈ ವೇಳೆ ಪತ್ನಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾಳೆ. ತಾನು ಹೊಡೆದ ಹೊಡೆತಕ್ಕೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದಲ್ಲಿ ಬುಧವಾರ ನಡೆದಿದೆ.

ನಾಗನೂರು ಪಟ್ಟಣದ ಅರಣ್ಯಸಿದ್ದೇಶ್ವರ ತೋಟದ ನಿವಾಸಿ ಮಹಾಂತೇಶ ಸಿದ್ದಪ್ಪ ಗೂಡೆನ್ನವರ ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಕಳೆದ ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ. ಬುಧವಾರ ದಂಪತಿ ನಡುವೆ ಜಗಳವಾಗಿದೆ. ಇದರಿಂದ ಹೆಂಡತಿಗೆ ಮಹಾಂತೇಶ ಹೊಡೆದಿದ್ದಾನೆ. ಆಗ ಪತ್ನಿ ಪ್ರಜ್ಞೆ ತಪ್ಪಿ ಕೆಳಗೆ ಬಿದ್ದಿದ್ದಾಳೆ. ಹೆಂಡತಿ ಕೆಳಗೆ ಬಿದ್ದಿದ್ದನ್ನು ನೋಡಿ ಅವಳು ಸಾವನ್ನಪ್ಪಿದ್ದಾಳೆ ಎಂಬ ಭಯದಲ್ಲಿ ಮನೆಯಲ್ಲಿರುವ ಗೋಡೆಯ ಗೂಟಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಮೂಡಲಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಮೂಡಲಗಿ ಪೊಲೀಸ್‌ ಠಾಣೆಯ ಪಿಎಸ್‌ಐ ಎಚ್‌ ವೈ ಬಾಲದಂಡಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಚಿಕ್ಕೋಡಿ: ಎಂಟು ವರ್ಷದ ಮಗಳ ಜತೆ ತಾಯಿ ಆತ್ಮಹತ್ಯೆ

ಬಂಕ್‌ನಿಂದ 400 ಲೀ. ಡೀಸೆಲ್‌ ಕಳ್ಳತನ

ಮೂಡಲಗಿ: ಗುರ್ಲಾಪೂರ ಸಮೀಪದ ಹಾರೂಗೇರಿ-ಕ್ರಾಸ್‌ ಬಳಿರುವ ಪೆಟ್ರೋಲ್‌ ಬಂಕ್‌ದಲ್ಲಿ ಮೇ 17 ರಾತ್ರಿ 400 ಲೀಟರ್‌ ಡೀಸೆಲ್‌ ಕಳ್ಳತನವಾಗಿದೆ ಎಂದು ಮೂಡಲಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 400 ಲೀಟರ್‌ ಡೀಸೆಲ್‌ ಕಳ್ಳತನವಾಗಿದೆ ಎಂದು ಪೆಟ್ರೋಲ್‌ ಬಂಕ್‌ ಮಾಲೀಕ ಮಂಜುನಾಥ ಶಾಬು ಜಗದಾಳ ಎಂಬುವವರು ಬುಧವಾರ ಮೂಡಲಗಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದಾರೆ.
 

Follow Us:
Download App:
  • android
  • ios