*  ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ನಡೆದ ಘಟನೆ*  ಆಸ್ತಿ ಹಂಚಿಕೆ ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯ*  ಮೃತಳ ಪತಿ ರಹಮಾನ್ ಸೇರಿ 6 ಜನರ ವಿರುದ್ಧ ಪ್ರಕರಣ ದಾಖಲು  

ಬೆಳಗಾವಿ(ಆ.12): ಸಹೋದರರ ಜೊತೆಗೂಡಿ ಪತ್ನಿಯನ್ನೇ ಪತಿ ಹತ್ಯೆಗೈದ ಘಟನೆ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಇಂದು(ಗುರುವಾರ) ನಡೆದಿದೆ. ರೇಷ್ಮಾ ರಹಮಾನ್ ತಾಸೆವಾಲೆ ಕೊಲೆಯಾದ ಮಹಿಳೆಯಾಗಿದ್ದಾಳೆ. 

Add Asianetnews Kannada as a Preferred SourcegooglePreferred

ಆಸ್ತಿ ಹಂಚಿಕೆ ವಿಚಾರವಾಗಿ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ರಹಮಾನ್ ರಾಡ್‌ನಿಂದ ಹೊಡೆದು ರೇಷ್ಮಾಳನ್ನ ಬರ್ಬರವಾಗಿ ಹತ್ಯೆಗೈದಿದ್ದಾನೆ ಎಂದು ತಿಳಿದು ಬಂದಿದೆ.

ವಿದೇಶದಲ್ಲಿ ಗಂಡ, ಕಾಮದಾಹದಿಂದ ದಾರಿ ತಪ್ಪಿದ ಪತ್ನಿ: ಬಳಿಕ ನಡೆದಿದ್ದು ಘನಘೋರ

ಈ ಸಂಬಂಧ ಮೃತಳ ಪತಿ ರಹಮಾನ್ ಸೇರಿ 6 ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಬಗ್ಗೆ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.