ನೇಣು ಬಿಗಿದು ಹೆಂಡತಿ ಕೊಲೆ ಮಾಡಿದ ಗಂಡ| ಹುಬ್ಬಳ್ಳಿಯ ಹನುಮಂತ ನಗರದಲ್ಲಿ ನಡೆದ ಘಟನೆ| ಆರೋಪಿಯನ್ನ ವಶಕ್ಕೆ ಪಡೆದ ಪೊಲೀಸರು| ಈ ಸಂಬಂಧ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಹುಬ್ಬಳ್ಳಿ(ಮಾ.15): ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ ತನ್ನ ಪತ್ನಿಯನ್ನೇ ನೇಣು ಬಿಗಿದು ಕೊಲೆ ಮಾಡಿದ ಘಟನೆ ಹನುಮಂತ ನಗರದಲ್ಲಿ ಇಂದು(ಸೋಮವಾರ) ನಡೆದಿದೆ. ಪಶ್ಚಿಮ ಬಂಗಾಳದ ಕೋಲ್ಕತ್ತಾ ಮೂಲದ ರೇಣುಕಾ(32) ಕೊಲೆಯಾದ ಮಹಿಳೆಯಾಗಿದ್ದಾಳೆ.

Add Asianetnews Kannada as a Preferred SourcegooglePreferred

ಮಹದೇವಪ್ಪ ತನ್ನ ಹೆಂಡತಿಯನ್ನೇ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹದೇವಪ್ಪ ನಗರದಲ್ಲಿ ಕಾರು ಚಾಲನೆ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ. ಪದೇ ಪದೆ ಇವರಿಬ್ಬರ ಮಧ್ಯೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ಹೇಳಲಾಗುತ್ತಿದೆ. ಇಂದೂ ಕೂಡ ಸತಿ- ಪತಿ ಮಧ್ಯೆ ಕಲಹ ನಡೆದಿದೆ. ಆದರೆ, ಕೋಪಗೊಂಡ ಮಹದೇವಪ್ಪ ನೇಣು ಬಿಗಿದು ರೇಣುಕಾಳನ್ನ ಹತ್ಯೆ ಮಾಡಿದ್ದಾನೆ.

ಬಳ್ಳಾರಿ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪೊಲೀಸ್‌ ಪೇದೆ

ಘಟನಾ ಸ್ಥಳಕ್ಕೆ ವಿದ್ಯಾನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಂಡತಿಯನ್ನ ಕೊಲೆ ಮಾಡಿದ ಮಹದೇವಪ್ಪನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿದ್ಯಾನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.