ಮನೆ ಕೆಲಸಕ್ಕೆ ಬಂದು ಮನೆಗುಡಿಸಿ ಗುಂಡಾಂತರ ಮಾಡಿದ ಕಳ್ಳರ ಬಂಧನ| ಬೆಂಗಳೂರಿನ ಸಿಸಿಬಿ ಪೊಲೀಸರ ಬಲೆಗೆ ಬಿದ್ದ ಖದೀಮರು|  ಬೆಂಗಳೂರಿನಲ್ಲಿ ಕದ್ದು ಚಿನ್ನಾಭರಣವನ್ನು ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಅಡಗಿಸಿಟ್ಟಿದ್ದ ಕಳ್ಳರು| . ಆರೋಪಿಗಳ ಬಂಧನದಿಂದ ಬೆಳಕಿಗೆ ಬಂದ 15 ಪ್ರಕರಣಗಳು| 

ಬೆಂಗಳೂರು(ಡಿ.12): ಮನೆ ಕೆಲಸಕ್ಕೆ ಬಂದು ಮನೆಗುಡಿಸಿ ಗುಂಡಾಂತರ ಮಾಡುತ್ತಿದ್ದ ಖತರ್ನಾಕ್‌ ಕಳ್ಳರನ್ನು ಬಂಧಿಸುವಲ್ಲಿ ನಗರದ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅನಂತ್ ಕುಮಾರ್, ರಮೇಶ್ ಚಂದ್ರ ಶಾಹೋ, ಬಿಶ್ವಜಿತ್ ಮಲ್ಲಿಕ್ ಹಾಗೂ ದುಲಾಲ್ ಸಿಂಗ್ ಎಂದು ಗುರುತಿಸಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಖದೀಮರು ನಗರದಲ್ಲಿ ಮನೆ ಕೆಲಸಕ್ಕೆಂದು ಬಂದು ಮಾಲೀಕರ ಮನೆ ಹಾಗೂ ಮತ್ತಿತರ ಮನೆಗಳಿಗೆ ಕನ್ನ ಹಾಕಿ ಚಿನ್ನಾಭರಣ ಹಾಗೂ ನಗದನ್ನು ದೋಚುತ್ತಿದ್ದರು ಎಂದು ತಿಳಿದು ಬಂದಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಬಂಧಿತ ಆರೋಪಿಗಳಿಂದ 64 ಲಕ್ಷ ಮೌಲ್ಯದ 1 ಕೆಜಿ 600 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ. ಈ ಖದೀಮರು ಬೆಂಗಳೂರಿನಲ್ಲಿ ಚಿನ್ನಾಭರಣ ಕದ್ದು ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಅಡಗಿಸಿಟ್ಟಿದ್ದರು ಎಂದು ತಿಳಿದು ಬಂದಿದೆ. ಇಲ್ಲಿ ಅಡಗಿಸಿಟ್ಟ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ಬಂಧನದಿಂದ ನಗರದಲ್ಲಿ ನಡೆದಿದ್ದ 15 ಪ್ರಕರಣಗಳು ಬೆಳಕಿಗೆ ಬಂದಿವೆ.