ಕೇರಳದಲ್ಲಿ ಒಬ್ಬ ಪಾದ್ರಿ ಅನಾರೋಗ್ಯ ಪೀಡಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ್ದಾನೆ. 'ಚಿಕಿತ್ಸೆ' ಹೆಸರಿನಲ್ಲಿ ಪಾದ್ರಿ ಮಹಿಳೆಯೊಂದಿಗೆ ಸಂಬಂಧ ಹೊಂದಲು ಪ್ರಯತ್ನಿಸಿದ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಪಾದ್ರಿಯನ್ನು ಬಂಧಿಸಿದ್ದಾರೆ.

ಕೇರಳ ಅಪರಾಧ: ಕನ್ಯಾಕುಮಾರಿ ಪೊಲೀಸರು ಪೆಂಟೆಕೊಸ್ಟಲ್ ಚರ್ಚ್‌ನ ಪಾದ್ರಿಯೊಬ್ಬರನ್ನು ಬಂಧಿಸಿದ್ದಾರೆ. ವಿವಾಹಿತ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿದ ಆರೋಪ ಹೊತ್ತಿದ್ದಾನೆ. ಮಹಿಳೆಯ ಅನಾರೋಗ್ಯವನ್ನು ಗುಣಪಡಿಸುವುದಾಗಿ ಹೇಳಿ ಆಕೆಯ ಜೊತೆ ಸಂಬಂಧ ಹೊಂದಲು ಯತ್ನಿಸಿದ್ದಾನೆ.

Add Asianetnews Kannada as a Preferred SourcegooglePreferred

ಪಾದ್ರಿ ಆಕೆಗೆ, 'ನಿನ್ನ ಆರೋಗ್ಯ ಸಮಸ್ಯೆಗಳು ನಿನ್ನ ಗಂಡನ ಜೊತೆಗಿನ ನಿನ್ನ ಸಂಬಂಧದಿಂದಾಗಿವೆ. ನಿನ್ನ ಗಂಡನ ವೀರ್ಯದಲ್ಲಿ ವಿಷ ಇದೆ. ನನ್ನ ಜೊತೆ ಮಲಗು. ನೀನು ನನ್ನಂಥ ಪಾದ್ರಿಯ ಜೊತೆ ಮಲಗಿದರೆ ಗುಣಮುಖಳಾಗುತ್ತೀಯ" ಎಂದು ಹೇಳಿದ್ದಾನೆ.

Scroll to load tweet…

ಮಹಿಳೆಯನ್ನು ಖಾಸಗಿ ಪ್ರಾರ್ಥನೆಗೆ ಕರೆದಿದ್ದ ಪಾದ್ರಿ:

ಸಂತ್ರಸ್ತ ಯುವತಿ ಕೆಲವು ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದಳು. ಚಿಕಿತ್ಸೆಯ ನಿರೀಕ್ಷೆಯಲ್ಲಿ ಮೆಕ್ಕಮಂಡಪಂ ಪ್ರದೇಶದ ಫುಲ್ ಗಾಸ್ಪೆಲ್ ಪೆಂಟೆಕೊಸ್ಟಲ್ ಚರ್ಚ್‌ಗೆ ಹೋಗಿದ್ದಳು. ಅಲ್ಲಿನ ಪಾದ್ರಿ ರೆಜಿಮೋನ್ ಖಾಸಗಿ ಪ್ರಾರ್ಥನೆಯ ಮೂಲಕ ಆಕೆಯನ್ನು ಗುಣಪಡಿಸಬಲ್ಲೆ ಎಂದು ನಂಬಿಸಿದ್ದ. ಅದರಂತೆ ಪ್ರಾರ್ಥನೆಗೆ ಹೆಸರಲ್ಲಿ ಬಲವಂತ ಮಾಡಲು ಶುರು ಮಾಡಿದ್ದ ಪಾದ್ರಿ. ಪ್ರಾರ್ಥನೆ ಹೆಸರಿನಲ್ಲಿ ಪಾದ್ರಿ ಆಕೆಯನ್ನು ಅಪ್ಪಿಕೊಂಡು ಬಲವಂತ ಮಾಡಲು ಯತ್ನಿಸಿದ. ಆದರೆ ಮಹಿಳೆ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾಳೆ. ಬಳಿಕ ತುಕ್ಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ದೂರಿನ ಮೇರೆಗೆ ಪೊಲೀಸರು ಪಾದ್ರಿ ರೆಜಿಮೋನ್‌ನನ್ನು ಜೂನ್ 26, 2025 ರಂದು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು.

ಸಂತ್ರಸ್ತೆ ಕುಟುಂಬದ ಪ್ರಕಾರ, ಮಹಿಳೆಗೆ ಮದುವೆಯಾಗಿ 2 ವರ್ಷಗಳಾಗಿವೆ. ಆರೋಗ್ಯ ಸಮಸ್ಯೆಗಳು ಮತ್ತು ಇತರ ವೈಯಕ್ತಿಕ ಸಮಸ್ಯೆಗಳಿಂದಾಗಿ ಆಕೆ ತನ್ನ ಹೆತ್ತವರ ಮನೆಯಲ್ಲಿ ವಾಸಿಸುತ್ತಿದ್ದಳು. ಸಂಬಂಧಿಕರು ಆಧ್ಯಾತ್ಮಿಕ ಚಿಕಿತ್ಸೆಯ ನಿರೀಕ್ಷೆಯಲ್ಲಿ ಆಕೆಯನ್ನು ಮೆಕ್ಕಮಂಡಪಂನ ಪಾಂಡೀವಿಲೈನಲ್ಲಿರುವ ಪಾದ್ರಿ ರೆಜಿಮೋನ್‌ನ ಚರ್ಚ್‌ಗೆ ಕರೆದೊಯ್ದಿದ್ದರು. ರೆಜಿಮೋನ್ ಆಕೆಗೆ ತನ್ನ ಆದಾಯದ 10% ಚರ್ಚ್‌ಗೆ ದಾನ ಮಾಡಿದರೆ ಆಕೆಯ ದೈಹಿಕ ಕಾಯಿಲೆಗಳು ಗುಣಮುಖವಾಗುತ್ತವೆ ಎಂದು ಹೇಳಿದ್ದನಂತೆ.