ಹಾವು ಕಚ್ಚಿಸಿ ಹೆಂಡತಿಯನ್ನು ಕೊಂದ ಪ್ರಕರಣ/ ವರದಿ ಸಲ್ಲಿಸಿದ ಕೇರಳ ಪೊಲೀಸರು/ ಕೌಟುಂಬಿಕ ದೌರ್ಜನ್ಯ ಮತ್ತು ವರದಕ್ಷಿಣೆ ಕಿರುಕುಳ/ ಆರೋಪಿ ಸೂರಜ್ ತಂದೆಯ ಬಂಧನ

ಕೋಲಂ(ಜೂ. 04) ವಿಷಸರ್ಪದಿಂದ ಕಚ್ಚಿಸಿ ಹೆಂಡತಿ ಕೊಲೆ ಮಾಡಿದ್ದ ಪಾತಕಕ್ಕೆ ಸಂಬಂಧಿಸಿ ಪೊಲೀಸರು ವರದಿ ಸಲ್ಲಿಸಿದ್ದಾರೆ. ಕೇರಳ ಮಹಿಳಾ ಆಯೋಗದ ನಿರ್ದೇಶನದಂತೆ ಪಥನಮತ್ತಟ್ಟ ಜಿಲ್ಲಾ ಪೊಲೀಸ್ ಮುಖ್ಯಸ್ಥ ವರದಿ ಸಲ್ಲಿಸಿದ್ದಾರೆ. 

Add Asianetnews Kannada as a Preferred SourcegooglePreferred

ಕೌಟುಂಬಿಕ ಹಿಂಸೆ ಮತ್ತು ವರದಕ್ಷಿಣೆ ಕಿರುಕುಳ ದೂರನ್ನು ಹತ್ಯೆಯಾದ ಊತ್ರಾ ಪೋಷಕರು ನೀಡಿದ್ದರು. ಊತ್ರಾ ಗಂಡನ ಕುಟುಂಬದಿಂದ ದೌರ್ಜನ್ಯಕ್ಕೆ ಒಳಗಾಗಿದ್ದರು. ಕೌಟುಂಬಿಕ ದೌರ್ಜನ್ಯ ಮತ್ತು ವರದಕ್ಷಿಣೆ ಸೆಕ್ಷನ್ ಗಳು ಇದಕ್ಕೆ ಅನ್ವಯವಾಗುತ್ತವೆ ಎಂದಿರುವ ಪೊಲೀಸರು ಕೋಲಂ ವಿಭಾಗದ ಪೊಲೀಸ್ ಮುಖ್ಯಸ್ಥರಿಗೆ ಸಲ್ಲಿಕೆ ಮಾಡಲಿದ್ದಾರೆ.

ವಿಷಪೂರಿತ ಹಾವು ಮನೆಗೆ ತಂದಿದ್ದಾದರೂ ಹೇಗೆ?

ಕೊಲೆ ಮತ್ತು ದೌರ್ಜನ್ಯ ಎರಡು ಪ್ರಕರಣಗಳನ್ನು ಒಂದೇ ಪೊಲೀಸ್ ವಿಭಾಗ ತನಿಖೆ ಮಾಡುವುದು ಒಳಿತು ಎಂದು ಹೇಳಲಾಗಿದೆ. ಊತ್ರಾ ಗಂಡ ಆರೋಪಿತ ಸೂರಜ್ ನ ಪೋಷಕರು ಮತ್ತು ಸಹೋದರಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಸುರಜ್ ತಂದೆ ಸುರೇಂದ್ರನ್ ಅವರನ್ನು ವಶಕ್ಕೆ ಪಡೆಯಲಾಗಿದೆ.

ಕೊಲೆಗೆ ಪ್ರಚೋದನೆ: ಪೊಲೀಸರ ವರದಿ ಹೇಳಿವಂತೆ ಸೂರಜ್ ತಂದೆ ಸುರೇಂದ್ರನ್ ಅಪರಾಧ ಕೃತ್ಯಕ್ಕೆ ಪ್ರಚೋದನೆ ನೀಡಿದ್ದರು ಎಂಬ ಮಾಹಿತಿಯೂ ಬಹಿರಂಗವಾಗಿದೆ. ಊತ್ರಾ ಚಿನ್ನಾಭರಣ ನಾಪತ್ತೆಯಾಗಲು ಏನು ಕಾರಣ ಎಂಬುದನ್ನು ತನಿಖೆ ಮಾಡಲಾಗುತ್ತಿದೆ.

ಹಾವನ್ನು ಬಳಸಿ ಹೆಂಡತಿಯನ್ನು ಭೀಕರವಾಗಿ ಕೊಲೆ ಮಾಡಿದ ಆರೋಪ ಸೂರಜ್ ಮೇಲಿದೆ. ಹಾವು ಕಚ್ಚಿ ಮೇ 7 ರಂದು ಉತ್ರಾ ಸಾವನ್ನಪ್ಪಿದ್ದರು. ಇದಾದ ಮೇಲೆ ಪೊಲೀಶರು ವಿಚಾರಣೆ ನಡೆಸಿದಾಗ ಹೆಂಡತಿಯನ್ನು ಕೊಲೆ ಮಾಡಿದ್ದಾಗಿ ಸೂರಜ್ ಒಪ್ಪಿಕೊಂಡಿದ್ದ. 10 ಸಾವಿರ ರೂ. ಕೊಟ್ಟು ಎರಡು ಹಾವು ತಂದಿದ್ದಾಗಿಯೂ ಹೇಳಿದ್ದ.