ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟಲ್ಲಿ ನಡೆದಿದ್ದ 2 ಕಂಟೇನರ್‌ಗಳಲ್ಲಿದ್ದ ₹400 ಕೋಟಿ ಮೌಲ್ಯದ ರದ್ದಾದ ಹಳೇ ನೋಟು ದರೋಡೆ ಕೇಸಿನ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಠಾಣೆಗೆ ಶರಣಾಗಿದ್ದಾನೆ. ಬಳಿಕ ಆತನನ್ನು ಬಂಧಿಸಲಾಗಿದೆ.

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟಲ್ಲಿ ನಡೆದಿದ್ದ 2 ಕಂಟೇನರ್‌ಗಳಲ್ಲಿದ್ದ ₹400 ಕೋಟಿ ಮೌಲ್ಯದ ರದ್ದಾದ ಹಳೇ ನೋಟು ದರೋಡೆ ಕೇಸಿನ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಘೋಟಿ ಠಾಣೆಗೆ ಶರಣಾಗಿದ್ದಾನೆ. ಬಳಿಕ ಆತನನ್ನು ಬಂಧಿಸಲಾಗಿದೆ.

Add Asianetnews Kannada as a Preferred SourcegooglePreferred

ಬಂಧಿತರ ಸಂಖ್ಯೆ ಎಂಟಕ್ಕೆ

ಇದರಿಂದ ಈ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ಎಂಟಕ್ಕೆ ಏರಿದೆ. ಮಹಾರಾಷ್ಟ್ರ ಸರ್ಕಾರ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಿದೆ. 

ಎಲ್ಲಾ ಆಯಾಮಗಳಲ್ಲಿಯೂ ಎಸ್‌ಐಟಿ ತನಿಖೆ

ಪ್ರಕರಣ ಸಂಬಂಧ ಉದ್ಯಮಿ, ದೂರುದಾರ ಸಂದೀಪ್ ದತ್ತಾ ಪಾಟೀಲ್ ಅಪಕರಣ ಮತ್ತು ಹಣ ದರೋಡೆ ಸಂಬಂಧ ಎಲ್ಲಾ ಆಯಾಮಗಳಲ್ಲಿಯೂ ಎಸ್‌ಐಟಿ ತನಿಖೆ ನಡೆಸುತ್ತಿದೆ. ಇತ್ತೀಚೆಗೆ ವೈರಲ್ ಆದ ಆಡಿಯೋ ಸಂಬಂಧವೂ ಪರಿಶೀಲನೆ ನಡೆಸಲಾಗುತ್ತಿದೆ.