ಚಾಮರಾಜನಗರ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ಸಿನ ಚಾಲಕನಿಗೆ ಹಠಾತ್ ಮೂರ್ಛೆ ಬಂದ ಪರಿಣಾಮ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ದುರ್ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಹನೂರಿನಿಂದ ಮೈಸೂರಿಗೆ ತೆರಳುತ್ತಿತ್ತು.

ಚಾಮರಾಜನಗರ (ಫೆ.9): ಬಸ್‌ನಲ್ಲಿ ಯಾವುದೋ ಕಾರ್ಯಕ್ರಮಕ್ಕೆ ಊರಿಗೆ ಹೋಗುತ್ತಿರುವಾಗ, ಬಸ್ ಗಂಟೆಗೆ 60ಕಿಮೀ ವೇಗದಲ್ಲಿ ಚಲಿಸುತ್ತಿರುತ್ತದೆ ಈ ವೇಳೆ ಇದ್ದಕ್ಕಿದ್ದಂತೆ ಬಸ್ ಚಾಲಕನಿಗೆ ಹೃದಯಾಘಾತವೋ, ಅಪಸ್ಮಾರ ಬಂದರೆ ಹೇಗೆ? ಅಬ್ಬಾ ನೆನಸಿಕೊಂಡರೇನೆ ಅರ್ಧ ಜೀವ ಹೋದಂತಾಗುತ್ತಲ್ಲವೇ? ಅಂಥ ದುರ್ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಹೌದು ಬಸ್ ಚಾಲಯಿಸುತ್ತಿರುವಾಗಲೇ ಚಾಲಕನಿಗೆ ಮೂರ್ಚೆ ಬಂದ ಪರಿಣಾಮ ವೇಗದಲ್ಲಿ ಬಸ್ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಹನೂರು ತಾಲೂಕಿನ ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದಲ್ಲಿ ನಡೆದಿದ್ದು, ದುರ್ಘಟನೆಯಲ್ಲಿ ಐವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಹಾನಿಯಾಗಿಲ್ಲ. 

ಇದನ್ನೂ ಓದಿ: ಮಂಡ್ಯದಲ್ಲಿ KSRTC ಬಸ್ ಪಲ್ಟಿ: 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್ ಹನೂರು ತಾಲೂಕಿನ ಒಡೆಯರಪಾಳ್ಯ ಗ್ರಾಮದಿಂದ ಮೈಸೂರಿಗೆ ತೆರಳುತ್ತಿತ್ತು. ಬಸ್‌ನಲ್ಲಿ ಸುಮಾರು 40 ಪ್ರಯಾಣಿಕರಿದ್ದರು ಎನ್ನಲಾಗಿದೆ. ವೇಗವಾಗಿ ಚಲಿಸುತ್ತಿದ್ದ ಬಸ್ ಚಿಕ್ಕರಂಗಶೆಟ್ಟಿದೊಡ್ಡಿ ಗ್ರಾಮದ ಬಳಿ ಬರುತ್ತಲೇ ಬಸ್ ಚಾಲಕನಿಗೆ ಹಠಾತ್ ಮೂರ್ಚೆ ಬಂದಿದೆ. ಈ ವೇಳೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ವೇಗದಲ್ಲೇ ಅಡ್ಡಾದಿಡ್ಡಿ ಚಲಿಸಿ ಕೊನೆಗೆ ಮರಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನುಜ್ಜುಗುಜ್ಜು ಆಗಿದೆ. ಮುಂಭಾಗದಲ್ಲಿ ಕುಳಿತಿದ್ದ ಐವರು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನ ಸಮೀಪದ ಆಸ್ಪತ್ರೆಗೆ ದಾಖಲಾಗಿದ್ದಾರೆ.