ಒಂದಾಗಲು ವಿರೋಧ ವ್ಯಕ್ತವಾಗಿದ್ದರಿಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಳ್ಳುವ ಮೂಲಕ ಸಾವಿನಲ್ಲಿ ಒಂದಾದಗಿದ್ದಾರೆ.

ಯಾದಗಿರಿ, (ಜ.19): ಪ್ರೇಮಿಗಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ವಡಿಗೇರಾ ತಾಲೂಕಿನ ಗುಂಡಗುರ್ತಿ ಗ್ರಾಮದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ಶರಣಬಸವ(23) ಮತ್ತು ಶೇಖಮ್ಮ(19) ಆತ್ಮಹತ್ಯೆಗೆ ಶರಣಾಗಿದ್ದು, ತಮ್ಮ ಪ್ರೀತಿಗೆ ಮನೆಯವರು ಸಮ್ಮತಿ ಸೂಚಿಸದ ಹಿನ್ನೆಲೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು; ಗರ್ಲ್ ಫ್ರೆಂಡ್ ಜತೆ ಮಾತಾಡುತ್ತಿದ್ದಾಗಲೇ ಹಿಂದಿಂದ ಏಟು ಬಿದ್ದಿತ್ತು!

ಶರಣಬಸವ ಹಾಗು ಶೇಖಮ್ಮ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಕುಟುಂಬದವರು ಮದುವೆಗೆ ಒಪ್ಪದಿರುವುದನ್ನೇ ಕಾರಣವಾಗಿಟ್ಟುಕೊಂಡು ಮನೆಯಲ್ಲಿರುವ ಪೈಪ್​ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 

ಘಟನಾ ಸ್ಥಳಕ್ಕೆ ಶಹಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಶಹಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.