ಕೌಟುಂಬಿಕ ಕಲಹ, ಸಾಲದಿಂದ ಬೇಸತ್ತು ಮಕ್ತುಂಪುರ ಗ್ರಾಮದ ಮಂಜುನಾಥ್ ಆತ್ಮಹತ್ಯೆಗೆ ಶರಣಾಗಿದ್ದರು. ಹೆಂಡತಿಯ ಅಣ್ಣನ ಮಗ ವೇದಾಂತ ಸೇರಿದಂತೆ ತನ್ನ ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಗದಗ(ನ.07): ಕೌಟುಂಬಿಕ ಕಲಹ, ಸಾಲದಿಂದ ಬೇಸತ್ತು ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ವ್ಯಕ್ತಿಗೆ ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಬ್ರಿಡ್ಜ್ ಬಳಿ ನಿನ್ನೆ(ಬುಧವಾರ) ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತುಂಗಭದ್ರಾ ನದಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕು ಮೃತ ದೇಹಗಳು ಪತ್ತೆಯಾಗಿವೆ. ನಿನ್ನೆ ಮೂರು ವರ್ಷದ ವೇದಾಂತ್, ಇಂದು ಮಂಜುನಾಥ ಅರಕೇರ (40) ಹಾಗೂ ಧನ್ಯ (6), ಹಾಗೂ ಪವನ್ (4) ಮೃತ ದೇಹಗಳು ಪತ್ತೆಯಾಗಿವೆ.

ಕೌಟುಂಬಿಕ ಕಲಹಕ್ಕೆ ಬೇಸತ್ತು ಗೃಹಣಿ ನೇಣು ಬಿಗಿದು ಆತ್ಮ*ತ್ಯೆ

ಮೃತದೇಹಗಳ ದೇಹಕ್ಕಾಗಿ ಮೀನುಗಾರರು ಹುಡುಕಾಟ ನಡೆಸಿದ್ದರು. ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಈಜುತಜ್ಜರು, ಮೀನುಗಾರು ಕಾರ್ಯಾಚರಣೆ ನಡೆಸಿದ್ದರು. ಮಂಗಳವಾರ ಸಂಜೆ ಮಂಜುನಾಥ್ ತನ್ನ ಮೂವರು ಮಕ್ಕಳೊಂದಿಗೆ ನದಿಗೆ ಹಾರಿದ್ದರು. 

ಕೌಟುಂಬಿಕ ಕಲಹ, ಸಾಲದಿಂದ ಬೇಸತ್ತು ಮಕ್ತುಂಪುರ ಗ್ರಾಮದ ಮಂಜುನಾಥ್ ಆತ್ಮಹತ್ಯೆಗೆ ಶರಣಾಗಿದ್ದರು. ಹೆಂಡತಿಯ ಅಣ್ಣನ ಮಗ ವೇದಾಂತ ಸೇರಿದಂತೆ ತನ್ನ ಇಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಸದ್ಯ ಮೃತ ದೇಹಗಳನ್ನ ಮುಂಡರಗಿ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ನಂತರ ಮೃತ ದೇಹಗಳನ್ನ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುತ್ತದೆ. ಮುಕ್ತಂಪುರ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದ‌ನ ಮುಗಿಲು ಮುಟ್ಟಿದೆ. ಮೃತತರೆಲ್ಲರೂ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಮಕ್ತಂಪುರ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.