*  ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಚಾರ ನರಸಾಪುರ ಗ್ರಾಮದಲ್ಲಿ ನಡೆದ ಘಟನೆ*  ಹಣ, ಚಿನ್ನ ಮತ್ತು ಗದ್ದೆ ನೀಡುವಂತೆ ಕಿರುಕುಳ ನೀಡುತ್ತಿದ್ದ ಮಹಿಳೆ *  ಈ ಕುರಿತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು  

ಗಂಗಾವತಿ(ಸೆ.15): ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಕಿರುಕುಳಕ್ಕೆ ಬೇಸತ್ತು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆಚಾರ ನರಸಾಪುರ ಗ್ರಾಮದಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ದೊಡ್ಡಬಸಪ್ಪ ಗುಂಡಪ್ಪ(48) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತನು ಮಹಿಳೆಯೊಂದಿಗೆ ಆಕ್ರಮ ಸಂಬಂಧ ಹೊಂದಿದ್ದ. ಮಹಿಳೆ ಹಣ, ಚಿನ್ನ ಮತ್ತು ಗದ್ದೆ ನೀಡುವಂತೆ ಕಿರುಕುಳ ನೀಡುತ್ತಿದ್ದಳು. 

ಯಾದಗಿರಿ; ವಯಸ್ಸಿಗೆ ಬಂದ ಹೆಣ್ಣು ಮಕ್ಕಳಿಗೆ ವಿಷ ಕೊಟ್ಟು ತಾನು ಸೇವಿಸಿದ ತಾಯಿ!

ಇದಕ್ಕೆ ಬೇಸತ್ತ ದೊಡ್ಡಬಸಪ್ಪ ಗುಂಡಪ್ಪ ಮರಳಿ ಗ್ರಾಮದ ತೋಟ ಒಂದರಲ್ಲಿ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.