* ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಗುತ್ತಿಗೆದಾರರು ಹಾಲಿಗೆ ನೀರು ಮಿಶ್ರಣ ಪ್ರಕರಣ* ಮನ್​ಮುಲ್​ ಹಾಲಿಗೆ ನೀರು ಬೆರೆಸಿದ ಪ್ರಕರಣ CID ಹೆಗಲಿಗೆ * CIDಗೆ ವಹಿಸಿ ರಾಜ್ಯ ಸರ್ಕಾರ ಆದೇಶ 

ಬೆಂಗಳೂರು/ಮಂಡ್ಯ, (ಜೂನ್,30): ಮನ್​ಮುಲ್​​ನಲ್ಲಿ ಹಾಲಿಗೆ ನೀರು ಹಾಕಿದ ಪ್ರಕರಣದ ತನಿಖೆಯನ್ನ CIDಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Add Asianetnews Kannada as a Preferred SourcegooglePreferred

ಪ್ರಕರಣ ಗಂಭೀರ ಹಾಗೂ ಸೂಕ್ಷ್ಮವಾಗಿರುವುದರಿಂದ ಪಾರದರ್ಶಕತೆ ಹಾಗೂ ತೀವ್ರತರ ತನಿಖೆ ನಡೆಸಬೇಕಾಗಿರುವುದರಿಂದ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಸರ್ಕಾರದ ಉಪ ಕಾರ್ಯದರ್ಶಿ ಬಿ.ಎಸ್.ನಾಗರತ್ಮಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಹಗರಣ ತನಿಖೆಗೆ ಗೌಡರಿಂದ ಅಡ್ಡಿ?: ಆಡಿಯೋ ವೈರಲ್‌

ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿರುವ ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ಗುತ್ತಿಗೆದಾರರು ಹಾಲಿಗೆ ನೀರು ಹಾಕಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ಮದ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಐಪಿಸಿ ಸೆಕ್ಷನ್ 406, 420 ಅನ್ವಯ ಎಫ್‌ಐಆರ್ ದಾಖಲಾಗಿತ್ತು.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಸಿಐಡಿ ತನಿಖೆಗೆ ವಹಿಸುವುದಾಗಿ ಸಿಎಂ ಬಿಎಸ್​ ಯಡಿಯೂರಪ್ಪ ಹೇಳಿದ್ದರು. ಆದರೆ ಬದಲಾದ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಆದೇಶ ಹೊರಡಿಸಲು ಯಡಿಯೂರಪ್ಪ ಹಿಂದೇಟು ಹಾಕಿದ್ದರು.

 'ಮನ್‌​ಮುಲ್‌ ಹಗ​ರ​ಣ ಸಂಬಂಧ ಯಾವ ತನಿಖೆಯಾದರೂ ಮಾಡಿಕೊಳ್ಳಲಿ'

ಇದಕ್ಕೆ ಆಕ್ರೋಶಗೊಂಡಿದ್ದ ಕಾಂಗ್ರೆಸ್​ ನಾಯಕ ಚಲುವರಾಯಸ್ವಾಮಿ 'ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡ ಕಾಲ್ ಮಾಡಿದ್ದಕ್ಕೆ ಸಿಐಡಿ ತನಿಖೆಗೆ ವಹಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಚಲುವರಾಯಸ್ವಾಮಿ ಅವರ ಈ ಆರೋಪ ಮಂಡ್ಯ ರಾಜಕಾರಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆಕ್ರೋಶಕ್ಕೂ ಇದು ಕಾರಣವಾಗಿತ್ತು.