ಮದುವೆ ನಂತರ ಜೀವನದಲ್ಲಿ ಖುಷಿ ಸಿಕ್ಕಿಲ್ಲ ಅಂತ ಆತ್ಮಹತ್ಯೆ| ಈ ಕುರಿತು ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| ತನಿಖೆ ಕಾರ್ಯ ಚುರುಕುಗೊಳಿಸಿದ ಪೊಲೀಸರು| 

ಸಿಂಧನೂರು(ಫೆ.19): ನನ್ನ ಸಾವಿಗೆ ನಾನೇ ಕಾರಣವೆಂದು ಡೆತ್‌ನೋಟ್‌ ಬರೆದಿಟ್ಟು ಗೃಹಿಣಿಯೊಬ್ಬರು ಆತ್ಮಹತ್ಯೆಗೆ ಶರಣರಾಗಿರುವ ಘಟನೆ ಬುಧವಾರ ಜರುಗಿದೆ. ನಗರದ ಶರಣಬಸವೇಶ್ವರ ಕಾಲೊನಿಯ ನಿವಾಸಿ ವೀಣಾ (28) ಮೃತ ದುರ್ದೈವಿ. 

Add Asianetnews Kannada as a Preferred SourcegooglePreferred

ಶರಣಪ್ಪ ಎಂಬಾತನ ಜೊತೆ 2013ರಲ್ಲಿ ಈಕೆಯ ವಿವಾಹವಾಗಿತ್ತು. ಮದುವೆ ನಂತರ ತನ್ನ ಜೀವನದಲ್ಲಿ ಖುಷಿ ಸಿಕ್ಕಿಲ್ಲ ಎಂದು ಡೆತ್‌ನೋಟ್‌ನಲ್ಲಿ ಬರೆದು ತಮ್ಮ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಗದಗ: ಬ್ಲೇಡ್‌ನಿಂದ ಬೇಕಾಬಿಟ್ಟಿ ಕುಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ವೈದ್ಯ

ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ತಂದು ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಈ ಕುರಿತು ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಡೆತ್‌ನೋಟ್‌ ವಶಕ್ಕೆ ಪಡೆದಿರುವ ಸಬ್‌ಇನ್ಸ್‌ಪೆಕ್ಟರ್‌ ವಿಜಯಕೃಷ್ಣ ತನಿಖೆ ಕಾರ್ಯ ಚುರುಕುಗೊಳಿಸಿದ್ದಾರೆ.