ಒಂದೆಡೆ ಕರ್ನಾಟಕದ ಎರಡು ವಿಧಾಸಭಾ ಕ್ಷೇತ್ರಗಳ ಉಪಚುನಾವಣೆ ಮತ ಎಣಿಕೆ ಇದ್ರೆ. ಮತ್ತೊಂದೆಡೆ ಮಾಜಿ ಸಿಎಂ ಪುತ್ರನ ಕಾರು ಅಘಾತಕ್ಕೀಡಾಗಿದೆ.

ದಾವಣಗೆರೆ, (ನ.10): ಮಾಜಿ ಸಿಎಂ, ಹಾಲಿ ಸಚಿವ ಜಗದೀಶ್ ಶೆಟ್ಟರ್ ಪುತ್ರ ಸಂಚರಿಸುತ್ತಿದ್ದ ಕಾರು ಅಪಘಾತವಾಗಿದೆ. ಇಂದು (ಮಂಗಳವಾರ) ದಾವಣಗೆರೆ ನಗರದ ಹಳೇ ಕುಂದುವಾಡ ಬಳಿಯ NH4 ನಲ್ಲಿ ಘಟನೆ ನಡೆದಿದೆ.

Add Asianetnews Kannada as a Preferred SourcegooglePreferred

ಪ್ರಶಾಂತ್ ಶೆಟ್ಟರ್, ಪತ್ನಿ ಅಂಚಲ್‌ ಗೆ ಸಣ್ಣಪುಟ್ಟ ಗಾಯಗಲಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ. ಡಿವೈಡರ್ ಬಳಿ KA 05 AR 6577 ನಂಬರಿನ ಲಾರಿ ಹಾಗೂ ಪ್ರಶಾಂತ್ ಶೆಟ್ಟರ್ ಇದ್ದ KA03 NE 8 ನಂಬರಿನ ರೇಂಜ್ ರೋವರ್ ಕಾರು ನಡುವೆ ಅಪಗಾತ ಸಂಭವಿಸಿದೆ.

ಡ್ರಗ್ಸ್‌ ಮಾಫಿಯಾ: ಕರ್ನಾಟಕದ ಮಾಜಿ ಸಚಿವರ ಪುತ್ರ ಅರೆಸ್ಟ್

ಘಟನೆಯಲ್ಲಿ ಪ್ರಶಾಂತ್ ಶೆಟ್ಟರ್ ಪುತ್ರ ಹಾಗೂ ಪತ್ನಿ (ಜಗದೀಶ್ ಶೆಟ್ಟರ್ ಸೊಸೆ) ಸೇರಿದಂತೆ ಮೂವರಿಗೆ ಸಣ್ಣಪುಟ್ಟ ಗಾಯಗಲಾಗಿದ್ದು, ಇವರನ್ನ ಹೈಟೆಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ದಾವಣಗೆರೆಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದಾಗ ಈ ಅಪಘಾತ ಆಗಿದೆ. ಸ್ಥಳಕ್ಕೆ ದಕ್ಷಿಣ ಸಂಚಾರ ಪೊಲೀಸ್ ಠಾಣೆ ಪಿಎಸ್ ಐ ಕಿರಣ್ ಕುಮಾರ್ ಭೇಟಿ, ಪರಿಶೀಲ‌ನೆ ನಡೆಸಿದರು.

ಇನ್ನು ಈ ಸ್ಥಳದಲ್ಲಿ ಪದೇ ಪದೇ ಅಪಘಾತ ನಡೆದರು ಕ್ರಮ ವಹಿಸುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಸರ್ವಿಸ್ ರಸ್ತೆ ನಿರ್ಮಾಣ ಮಾಡುವಂತೆ ಸ್ಥಳಿಯರ ಪಟ್ಟು ಹಿಡಿದರು.

ಅರೆ ಬರೆ ರಸ್ತೆ ನಿರ್ಮಾಣ ಮಾಡಿ ಕಾಮಗಾರಿ ನಿಲ್ಲಿಸಲಾಗಿದೆ. ಈ ಹಿನ್ನಲೆಯಲ್ಲಿಯೇ ಸರಣಿ ಅಪಘಾತಗಳು ನಡೆಯುತ್ತಿವೆ. ಈ ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಆಗ್ರಹಿಸಿದರು.