ಪೋಷಕರ ನಿರ್ಲಕ್ಷದಿಂದ ಏರ್‌ಗನ್‌ ಮಿಸ್ ಫೈರ್‌ ಆಗಿ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ. ವಿಷ್ಣುರಾಜ್(8) ಮೃತ ಬಾಲಕ.

ಚಿಕ್ಕಮಗಳೂರು (ಏ.12): ಪೋಷಕರ ನಿರ್ಲಕ್ಷದಿಂದ ಏರ್‌ಗನ್‌ ಮಿಸ್ ಫೈರ್‌ ಆಗಿ ಬಾಲಕನೋರ್ವ ದಾರುಣವಾಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಲ್ಲೇನಹಳ್ಳಿಯ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ನಡೆದಿದೆ.

Add Asianetnews Kannada as a Preferred SourcegooglePreferred

ವಿಷ್ಣುರಾಜ್(8) ಮೃತ ಬಾಲಕ. ಕಾಫಿತೋಟದಲ್ಲಿ ಮಂಗಗಳನ್ನ ಓಡಿಸಲು ಬಳಸುವ ಏರ್ ಗನ್. ಏರ್‌ಗನ್ ಮಗುವಿನ ಕೈಗೆ ಸಿಗದಂತೆ ಎತ್ತರದಲ್ಲಿಡದೆ ನಿರ್ಲಕ್ಷ್ಯವಹಿಸಿರುವ ಪೋಷಕರು. ಹೀಗಾಗಿ ಏರ್‌ಗನ್ ಹಿಡಿದು ಆಟವಾಡುತ್ತಿದ್ದ ಬಾಲಕ. ಈ ವೇಳೆ ಏರ್‌ಗನ್ ಉಲ್ಟಾ ಹಿಡಿದು ಟ್ರಿಗರ್ ಒತ್ತಿರುವ ಬಾಲಕ. ಮಿಸ್ಫೈರ್ ಆಗಿ ಎದೆಯ ಭಾಗಕ್ಕೆ ಗುಂಡುಹೊಕ್ಕಿದೆ. ತೀವ್ರ ಗಾಯಗೊಂಡ ಮಗು ಪೋಷಕರ ಕಣ್ಮುಂದೆ ಪ್ರಾಣಬಿಟ್ಟಿರುವ ಬಾಲಕ. ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ.

 ಮಲೆನಾಡಿನಲ್ಲಿ ಧಾರಾಕಾರ ಮಳೆ: ಕಾಫಿ ಬೆಳೆಗಾರರಲ್ಲಿ ಹರ್ಷ

ಸದ್ ಬಾಲಕನ ಮೃತದೇಹ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಒಂದು ಸಣ್ಣ ತಪ್ಪಿನಿಂದ, ನಿರ್ಲಕ್ಷ್ಯದಿಂದಾಗಿ ಎಂತಹ ಅನಾಹುತಗಳಾಗುತ್ತವೆಂಬುದು ಈ ಘಟನೆ ಸಾಕ್ಷಿಯಾಗಿದೆ. ಅಪಾಯಕಾರಿ, ಸ್ಫೋಟಕ, ಕೀಟನಾಶಕದಂತಹ ವಸ್ತುಗಳು ಮಕ್ಕಳ ಕೈಗೆ ಸಿಗದಂತೆ ಎತ್ತರದ ಸ್ಥಳದಲ್ಲಿರಿಸಬೇಕು. ಏರ್‌ಗನ್ ಬಗ್ಗೆ ಪೋಷಕರು ನಿರ್ಲಕ್ಷ್ಯ ಹೆತ್ತಮಗುವನ್ನು ಕಳೆದುಕೊಳ್ಳುವಂತೆ ಮಾಡಿದ್ದು ದುರ್ದೈವ.