ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ, ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಮನಗರ ನಗರದ ಕುಮಾರಸ್ವಾಮಿ ‌ಲೇಔಟ್‌ನಲ್ಲಿ ನಡೆದ ಘಟನೆ. 

ರಾಮನಗರ(ಜ.14): ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿ, ಮಗ ದಾರುಣವಾಗಿ ಸಾವನ್ನಪ್ಪಿದ ಘಟನೆ ರಾಮನಗರ ನಗರದ ಕುಮಾರಸ್ವಾಮಿ ‌ಲೇಔಟ್‌ನಲ್ಲಿ ನಿನ್ನೆ(ಶುಕ್ರವಾರ) ನಡೆದಿದೆ. ತಾಯಿ ವಿಜಯಲಕ್ಷ್ಮಿ (50), ಮಗ ಹರ್ಷ(25) ಎಂಬುವರೇ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. 

Add Asianetnews Kannada as a Preferred SourcegooglePreferred

ರಾತ್ರಿ ಊಟ ಮಾಡುವ ವಿಚಾರವಾಗಿ ತಾಯಿ ಮಗನ ನಡುವೆ ಮಾತಿನ ಚಕಮಕಿ ನಡೆದಿದೆ. ಇದರಿಂದ ಮನನೊಂದ ತಾಯಿ ವಿಜಯಲಕ್ಷ್ಮೀ ಮನೆಯ ಬಳಿಯ ಸಂಪಿಗೆ ಬಿದ್ದಿದ್ದಳು. ಆಸ್ಪತ್ರೆಗೆ ಸೇರಿಸುವಾಗ ತಾಯಿ ವಿಜಯಲಕ್ಷ್ಮೀ ಮೃತಪಟ್ಟಿದ್ದರು.

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ದರೋಡೆಕೋರರು ಅರೆಸ್ಟ್‌

ಈ ವಿಚಾರ ತಿಳಿದು ತೀವ್ರವಾಗಿ ಮನನೊಂದ ಹರ್ಷ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಅಂತ ತಿಳಿದು ಬಂದಿದೆ. ಈ ಸಂಬಂಧ ಐಜೂರು‌ ಪೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದೆ.