ಮನೆಯಲ್ಲಿ ಮೇಘ, ಪುನ್ವಿತಾ, ಮನ್ವಿತಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಧನಂಜಯ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆಗೈದು ನೇತು ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. 

ಚಾಮರಾಜನಗರ(ಸೆ.15):  ತಾಯಿ ಹಾಗೂ ಇಬ್ಬರ ಮಕ್ಕಳು ಕೊಲೆಯಾದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಬೊಮನಹಳ್ಳಿ ಬಳಿ ನಡೆದಿದೆ. ಮೇಘ(24), ಪುನ್ವಿತಾ(06), ಮನ್ವಿತಾ (03) ಮೃತಪಟ್ಟ ದುರ್ದೈವಿಗಳಾಗಿದ್ದಾರೆ. 

Add Asianetnews Kannada as a Preferred SourcegooglePreferred

ಪತಿಯಿಂದಲೇ ಪತ್ನಿ ಹಾಗೂ ಇಬ್ಬರು ಮಕ್ಕಳ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ. 

ಕಿರುಕುಳ ತಾಳದೇ ತವರುಮನೆ ಸೇರಿದ್ದ ಪತ್ನಿಯನ್ನ ಗುಂಡು ಹಾರಿಸಿ ಕೊಂದ ಪತಿ!

ಮನೆಯಲ್ಲಿ ಮೇಘ, ಪುನ್ವಿತಾ, ಮನ್ವಿತಾ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪತಿ ಧನಂಜಯ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆಗೈದು ನೇತು ಹಾಕಿದ್ದಾನೆ ಎಂದು ಆರೋಪಿಸಲಾಗಿದೆ. ಇವರ ಸಾವಿಗೆ ಪೊಲೀಸರ ತನಿಖೆಯಿಂದಷ್ಟೇ ನಿಖರವಾದ ಕಾರಣ ತಿಳಿದು ಬರಬೇಕಿದೆ.