*  ಮೈಸೂರು ಜಿಲ್ಲೆಯ ತಾಲೂಕಿನ ನಂಜನಗೂಡು ದಾಸನೂರು ಗ್ರಾಮದಲ್ಲಿ ನಡೆದ ಘಟನೆ*  ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಮಹಿಳೆ*  ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು  

ನಂಜನಗೂಡು(ಜೂ.02): ಮಾನಸಿಕ ಖಿನ್ನತೆಗೆ ಒಳಗಾಗಿ ತಾಯಿಯೊಬ್ಬಳು ತನ್ನ 8 ತಿಂಗಳ ಮಗುವಿನೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಮಂಗಳವಾರ ಸಂಜೆ ತಾಲೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗ್ರಾಮದ ಮಹದೇವಸ್ವಾಮಿಯವರ ಪತ್ನಿ ಸಿಂಧು (24) ಮಗು ಮುದ್ದುಮಾದಯ್ಯನೊಂದಿಗೆ ಆತ್ಮಹತ್ಯೆ ಮಾಡಿಕೊಂಡವರು. 9 ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ತೊರೆವಳ್ಳಿ ಗ್ರಾಮದ ಸಿಂಧುವನ್ನು ದಾಸನೂರು ಗ್ರಾಮದ ಮಹದೇವಸ್ವಾಮಿ ಜೊತೆ ವಿವಾಹ ಮಾಡಿಕೊಡಲಾಗಿತ್ತು. ಸಿಂಧುವಿಗೆ 4 ಬಾರಿ ಗರ್ಭಪಾತವಾಗಿದ್ದರಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. 

ಚಿಕ್ಕೋಡಿ: ಎಂಟು ವರ್ಷದ ಮಗಳ ಜತೆ ತಾಯಿ ಆತ್ಮಹತ್ಯೆ

ಮಂಗಳವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮಗು ಸಮೇತ ಬೆಂಕಿ ಹಚ್ಚಿಕೊಂಡಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಸಹ ಚಿಕಿತ್ಸೆ ಫಲಕಾರಿಯಾದೆ ಮೃತಪಟ್ಟಿದ್ದಾರೆ. ದೊಡ್ಡ ಕವಲಂದೆ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.