ಕೊಲೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಹೋಗಿದ್ದ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ವೇಳೆ ಆರೋಪಿ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಿದ ಘಟನೆ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೆರುಘಟ್ಟ ರಸ್ತೆಯ ಗುಳುಕಮಲೆ ಬಳಿ ನಡೆದಿದೆ.

ಬೆಂಗಳೂರು (ಮಾ.16): ಕೊಲೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಹೋಗಿದ್ದ ಪೊಲೀಸರ ಮೇಲೆಯೇ ಆರೋಪಿ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ ವೇಳೆ ಆರೋಪಿ ಕಾಲಿಗೆ ಫೈರಿಂಗ್ ಮಾಡಿ ಬಂಧಿಸಿದ ಘಟನೆ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬನ್ನೆರುಘಟ್ಟ ರಸ್ತೆಯ ಗುಳುಕಮಲೆ ಬಳಿ ನಡೆದಿದೆ.

Add Asianetnews Kannada as a Preferred SourcegooglePreferred

ಸೋಮೇಶ್ ಬಂಧಿತ ಆರೋಪಿ. ನಾಲ್ಕೈದು ಕೊಲೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಪಾತಕಿ ಸೋಮೇಶ್. ನಿನ್ನೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು. ಕೊಲೆ ನಡೆದ ಸ್ಥಳದ ಮಹಜರು ನಡೆಸಲು ಆರೋಪಿಯೊಂದಿಗೆ ಬಂದಿದ್ದ ಪೊಲೀಸರು. 

ಹೋಟೆಲ್ ನಲ್ಲಿ ಉಜ್ಬೇಕಿಸ್ತಾನ ಯುವತಿಯ ಕೊಲೆ ಪ್ರಕರಣ - ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ

ಸ್ಥಳ ಪರಿಶೀಲನೆ ವೇಳೆ ಏಕಾಏಕಿ ಪೊಲೀಸರ ಮೇಲೆ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಲು ಯತ್ನಿಸಿರುವ ಆರೋಪಿ. ಈ ವೇಳೆ ಆತ್ಮರಕ್ಷಣೆಗಾಗಿ ಕಗ್ಗಲೀಪುರ ಇನ್ಸ್‌ಪೆಕ್ಟರ್ ಸುಂದರ್ ರಿಂದ ಆರೋಪಿ ಕಾಲಿಗೆ ಗುಂಡು ಹೊಡೆದು ಬಂಧಿಸಿದ ಪೊಲೀಸರು. ಸ್ಥಳಕ್ಕೆ ರಾಮನಗರ ಡಿವೈಎಸ್‌ಪಿ ದಿನಕರ್ ಶೆಟ್ಟಿ ಬೇಟಿ ನೀಡಿ ಪರಿಶೀಲನೆ ನಡೆಸಿದರು.

ಬಿಟೆಕ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ವಿವಿ ಕುಲಪತಿ ಸೇರಿ 7 ಜನರ ವಿರುದ್ಧ ಎಫ್‌ಐಆರ್