Asianet Suvarna News Asianet Suvarna News

ಮಗಳನ್ನು ಒಪ್ಪಿಸದಿದ್ದರೆ ‘ಸರ್ ತನ್‌ ಸೆ ಜುದಾ: ಹಿಂದೂ ಕುಟುಂಬಕ್ಕೆ ಮುಸ್ಲಿಂ ಯುವಕ ಬೆದರಿಕೆ

Crime News: ಮಗಳನ್ನು ತನಗೆ ಒಪ್ಪಿಸದಿದ್ದರೆ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದಡಿ ಮುಸ್ಲಿಂ ಯುವಕನ್ನು ಬಂಧಿಸಲಾಗಿದೆ

Muslim boy threatens to behead entire Hindu family by if they do not hand over their daughter to him arrested in Uttar Pradesh mnj
Author
First Published Sep 2, 2022, 5:04 PM IST

ಲಖನೌ (ಸೆ. 02): ಮಗಳನ್ನು ತನಗೆ ಒಪ್ಪಿಸದಿದ್ದರೆ ಹಿಂದೂ ಕುಟುಂಬದ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ ಆರೋಪದಡಿ ಗಾಜಿಯಾಬಾದ್‌ನ ಲೋನಿಯ ಮುಸ್ಲಿಂ ಯುವಕನ್ನು ಬಂಧಿಸಲಾಗಿದೆ. ಯುವತಿಯ ತಂದೆ ರಾಜೇಶ್ ಶರ್ಮಾ ದಾಖಲಿಸಿರುವ ದೂರಿನಲ್ಲಿ ಆರೋಪಿ ಯುವತಿಯ ಕೆಲವು ಆಕ್ಷೇಪಾರ್ಹ ಛಾಯಾಚಿತ್ರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಉಲ್ಲೇಖಿಸಿದ್ದಾರೆ.

ಈ ವರ್ಷ ಜೂನ್‌ನಲ್ಲಿ ಮುಸ್ಲಿಂ ಹುಡುಗನೊಂದಿಗೆ ತನ್ನ ಸ್ವಂತ ಇಚ್ಛೆಯ ಮೇರೆಗೆ ಯುವತಿ ಓಡಿಹೋಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.  ಅಲ್ಲದೇ ಪೊಲೀಸರ ಮುಂದೆ ನೀಡಿದ ಹೇಳಿಕೆಯಲ್ಲಿ ಯುವತಿ ಆರೋಪಿಯೊಂದಿಗೆ ಸಂಬಂಧ ಹೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ.  ಯುವತಿ ಕುಟುಂಬದವರು ನೀಡಿದ ದೂರಿನ ನಂತರ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. 

ಪೊಲೀಸರು ಈ ಹಿಂದೆ ಬಾಗ್‌ಪತ್‌ನ ಖೇಕ್ಡಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 506 (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಮತ್ತು ಐಟಿ ಕಾಯ್ದೆಯ 67 ಎ ಅನ್ವಯ ಪ್ರಕರಣ ದಾಖಲಿಸಿದ್ದರು ಎಂದು ಟೈಮ್ಸ್‌ ನೌ ವರದಿ ಮಾಡಿದೆ.  ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. 

ಬೆಂಗಳೂರು: ಯುವತಿ ಮೇಲೆ ಸ್ನೇಹಿತರಿಂದಲೇ ಗ್ಯಾಂಗ್ ರೇಪ್

ಪ್ರೀತಿಸಲು ಒಪ್ಪದಿದ್ದಕ್ಕೆ ಪೆಟ್ರೋಲ್‌ ಸುರಿದು ಯುವತಿ ಹತ್ಯೆ: ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದಿದ್ದಕ್ಕೆ ಯುವಕನೊಬ್ಬನು 12ನೇ ತರಗತಿ ವಿದ್ಯಾರ್ಥಿನಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿ ಭೀಕರವಾಗಿ ಹತ್ಯೆ ಮಾಡಿದ ಪ್ರಕರಣ ಜಾರ್ಖಂಡದ ದುಮ್ಕಾ ಜಿಲ್ಲೆಯಲ್ಲಿ ವರದಿಯಾಗಿದೆ.

19 ವರ್ಷದ ತರುಣಿಯ ದೇಹ ಶೇ. 90ರಷ್ಟುಸುಟ್ಟುಹೋಗಿದ್ದು, ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ದಾಖಲಿಸಲಾಗಿತ್ತು. ಆದರೂ ಆಕೆ ಚಿಕಿತ್ಸೆಗೆ ಸ್ಪಂದಿಸದೇ ಭಾನುವಾರ 2:30 ಕ್ಕೆ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಆಕೆಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಆರೋಪಿ ಶಾರುಖ್‌ನನ್ನು ಬಂಧಿಸಲಾಗಿದೆ.

ಆಗಿದ್ದೇನು?: ಆರೋಪಿ ಶಾರುಖ್‌ ಯುವತಿಗೆ ತನ್ನ ಪ್ರಿಯತಮೆ ಆಗುವಂತೆ ಕೇಳಿ 10 ದಿನಗಳ ಹಿಂದೆ ಕರೆ ಮಾಡಿದ್ದ. ಸೋಮವಾರ ಮತ್ತೆ ರಾತ್ರಿ 8ರ ಸುಮಾರಿಗೆ ಆರೋಪಿ ಕರೆ ಮಾಡಿ, ತನ್ನೊಂದಿಗೆ ಮಾತನಾಡದಿದ್ದರೆ ಯುವತಿಯ ಹತ್ಯೆ ಮಾಡುವುದಾಗಿ ಆಕೆಗೆ ಬೆದರಿಕೆ ಒಡ್ಡಿದ್ದ. ಈ ಬಗ್ಗೆ ಯುವತಿ ತನ್ನ ತಂದೆಗೆ ತಿಳಿಸಿದಾಗ ಅವರು ಶಾರುಖ್‌ ಪಾಲಕರೊಂದಿಗೆ ಈ ಬಗ್ಗೆ ಮಾರನೇ ದಿನ ಮಾತನಾಡುವುದಾಗಿ ಹೇಳಿದರು. ಊಟದ ನಂತರ ಯುವತಿ ತನ್ನ ಕೋಣೆಗೆ ಮಲಗಲು ಹೋಗಿದ್ದಳು. 

ಮರುದಿನ ಮುಂಜಾನೆ ಕಿಟಕಿಯಿಂದ ಶಾರುಖ್‌ ಯುವತಿಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿದ್ದಾನೆ. ಯುವತಿ ನೋವಿನಿಂದ ಚೀರುತ್ತ ತನ್ನ ತಂದೆಯ ಕೋಣೆಗೆ ಹೋದಾಗ ಅವಳ ಪಾಲಕರು ಬೆಂಕಿ ನಂದಿಸಿ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೂ ಸುಟ್ಟಗಾಯಗಳಿಂದ ಯುವತಿ ಮೃತಪಟ್ಟಿದ್ದಾಳೆ.

Follow Us:
Download App:
  • android
  • ios