ಉದ್ಯಮಿ ರವಿ ಕಾವಡೆ ಎಂಬುವರಿಂದ 18 ಲಕ್ಷ ಪಡೆದು ವಂಚಿಸಿದ ಆರೋಪಿಗಳು| ಕೂಲಿ ಕಾರ್ಮಿಕರನ್ನು ಕರೆತರಲು ಒಬ್ಬರಿಗೆ  1 ಲಕ್ಷ ಕೊಡಬೇಕು ಎಂದು 2019ರ ಏಪ್ರಿಲ್‌ನಲ್ಲಿ ಹಣ ಪಡೆದು ತೆರಳಿದ್ದ ಆರೋಪಿಗಳು| ಈ ಸಂಬಂಧ ಸೈಬರ್‌ ಠಾಣೆಯಲ್ಲಿ ಪ್ರಕರಣ ದಾಖಲು| 

ಹುಬ್ಬಳ್ಳಿ(ಡಿ.09): ಮಾವನೂರ ಗ್ರಾಮದ ಇಟ್ಟಂಗಿ ಬಟ್ಟಿಗೆ ಕಾರ್ಮಿಕರನ್ನು ಕರೆ ತರುವುದಾಗಿ ಹೇಳಿದ ಇಬ್ಬರು ಗುತ್ತಿಗೆದಾರರು ಕೇಶ್ವಾಪುರದ ಉದ್ಯಮಿ ರವಿ ಕಾವಡೆ ಎಂಬುವರಿಂದ 18 ಲಕ್ಷ ಪಡೆದು ವಂಚನೆ ಮಾಡಿರುವ ಬಗ್ಗೆ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Add Asianetnews Kannada as a Preferred SourcegooglePreferred

ಒರಿಸ್ಸಾ ಹನ್ಸಚಂದ್ರ ಜುಡಿಸ್ಟರ್‌ ಮತ್ತು ಭಾಂದನಾ ಬಾಗ್‌ ಆರೋಪಿಗಳು. ಕೂಲಿ ಕಾರ್ಮಿಕರನ್ನು ಕರೆತರಲು ಒಬ್ಬರಿಗೆ 1 ಲಕ್ಷ ಕೊಡಬೇಕು ಎಂದು 2019ರ ಏಪ್ರಿಲ್‌ನಲ್ಲಿ ಹಣ ಪಡೆದು ತೆರಳಿದ್ದರು. ಬಳಿಕ ಸಂಪರ್ಕದಿಂದ ದೂರವಾಗಿದ್ದಾರೆ. ಹಣವನ್ನೂ ಮರಳಿಸಿಲ್ಲ, ಕೂಲಿಗಳನ್ನು ಕಳಿಸದೆ ವಂಚಿಸಿದ್ದಾರೆ ಎಂದು ಉದ್ಯಮಿ ರವಿ ದೂರಲ್ಲಿ ದಾಖಲಿಸಿದ್ದಾರೆ.

ಕಡಿಮೆ ಬೆಲೆಗೆ ಗ್ಲೌಸ್‌ ನೀಡುವುದಾಗಿ 45 ಲಕ್ಷ ದೋಚಿದ ಸೈಬರ್‌ ಕಳ್ಳರು

ಕರೋಡ್‌ ಪತಿ 1.75 ಲಕ್ಷ ವಂಚನೆ

ಕೌನ್‌ ಬನೇಗಾ ಕರೋಡಪತಿ, ಸ್ಪರ್ಧೆಯಲ್ಲಿ 25 ಲಕ್ಷ ಗೆದ್ದಿರುವುದಾಗಿ ಇಲ್ಲಿನ ಹೊಸೂರಿನ ನಿವಾಸಿ ಶ್ರೀಧರ ಚೌಧರಿ ಅವರನ್ನು ನಂಬಿಸಿ ಅವರ ಖಾತೆಯಿಂದ 1.75 ಲಕ್ಷವನ್ನು ವರ್ಗಾಯಿಸಿಕೊಂಡು ವಂಚಿಸಿದ ಪ್ರಕರಣ ಸೈಬರ್‌ ಠಾಣೆಯಲ್ಲಿ ದಾಖಲಾಗಿದೆ. ಹಿಂದಿಯಲ್ಲಿ ಮಾತನಾಡಿದ ವಂಚಕ ಗೆದ್ದಿರುವ ಹಣ ಪಡೆಯಲು ಆದಾಯ ತೆರಿಗೆ, ಜಿಎಸ್ಟಿ ಶುಲ್ಕ ಎಂದು ಹಣ ವರ್ಗಾಯಿಸಬೇಕು ಎಂದು ನಂಬಿಸಿ ಹಣ ವರ್ಗಾವಣೆ ಮಾಡಿಸಿಕೊಂಡಿದ್ದಾನೆ ಎಂದು ದೂರು ದಾಖಲಾಗಿದೆ.