Asianet Suvarna News Asianet Suvarna News

ಲಾಕ್‌ಡೌನ್‌: ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ನೇಕಾರ ಆತ್ಮಹತ್ಯೆ

ಆತ್ಮಹತ್ಯೆಗೆ ಶರಣಾದ ವ್ಯಕ್ತಿ| ಬೆಳಗಾವಿ ತಾಲೂಕಿನ ವಡಗಾವಿಯಲ್ಲಿ ನಡೆದ ಘಟನೆ| ಲಾಕ್‌ಡೌನ್‌ನಿಂದಾಗಿ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದ ಮೃತನ ಕುಟುಂಬ| ಈ ಸಂಬಂಧ ವಡಗಾವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು| 

Person Committed Suicide in Belagavi Districtgrg
Author
Bengaluru, First Published Oct 2, 2020, 3:30 PM IST

ಬೆಳಗಾವಿ(ಅ.02): ಕೋವಿಡ್‌​-19 ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ನೇಕಾರನೊಬ್ಬ ನೇಣಿಗೆ ಶರಣಾಗಿರುವ ಘಟನೆ ಗುರುವಾರ ಬೆಳಗಿನ ಜಾವ ಬೆಳಗಾವಿ ತಾಲೂಕಿನ ವಡಗಾವಿಯಲ್ಲಿ ನಡೆದಿದೆ. 

ಸಂತೋಷ ಢಗೆ(35) ಆತ್ಮಹತ್ಯೆ ಮಾಡಿಕೊಂಡ ನೇಕಾರ. ಕೊರೋನಾ ಸೋಂಕು ಹರಡುವಿಕೆ ತಡೆಗೆ ಕೇಂದ್ರ ಸರ್ಕಾರ ಲಾಕ್‌ಡೌನ್‌ ಜಾರಿಗೊಳಿಸಿತ್ತು. 

ಹುಬ್ಬಳ್ಳಿ: ಹಣದಾಸೆ ತೋರಿಸಿ ಕೈಕೊಟ್ಟ ಬಿಜೆಪಿ ಮುಖಂಡ, ಗೃಹಿಣಿ ಆತ್ಮಹತ್ಯೆ

ಇದರಿಂದಾಗಿ ಇವರ ಕುಟುಂಬ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿತ್ತು. ಆರ್ಥಿಕ ಸಂಕಷ್ಟದಿಂದ ಹೊರಬಾರದೇ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ವಡಗಾವಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Follow Us:
Download App:
  • android
  • ios