ಧಾರವಾಡ ತಾಲೂಕಿನ ನುಗ್ಗಿಕೇರಿ ಗ್ರಾಮದಲ್ಲಿ ನಡೆದ ಘಟನೆ| ಮದ್ಯದ ಅಮಲಿನಲ್ಲಿ ಬಾಗಿಲು ಮುಚ್ಚಿದ್ದ ಅಂಗಡಿಯೊಂದರ ಮುಂದೆ ನೇಣೆಗೆ ಶರಣು| ಈ ಸಂಬಂಧ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು| 

ಧಾರವಾಡ(ಮಾ.17): ಕೌಟುಂಬಿಕ ಕಲಹದಿಂದ ಬೇಸತ್ತು ಮದ್ಯದ ಅಮಲಿನಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನುಗ್ಗಿಕೇರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸುರೇಶ ಯಲ್ಲಪ್ಪ ವಗ್ಗರ (25) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾರೆ. 

Add Asianetnews Kannada as a Preferred SourcegooglePreferred

ಕೆಲ ದಿನಗಳಿಂದ ಕೌಟುಂಬಿಕ ಕಲಹದಿಂದ ಬೇಸತ್ತಿದ್ದ ಈತ ಕುಡಿದ ಮದ್ಯದ ಅಮಲಿನಲ್ಲಿ ಬಾಗಿಲು ಮುಚ್ಚಿದ್ದ ಅಂಗಡಿಯೊಂದರ ಮುಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. 

ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಯುವಕ ಆತ್ಮಹತ್ಯೆ : ಡೆತ್‌ನೋಟ್‌ನಲ್ಲೇನಿತ್ತು..?

ಈ ಕುರಿತಂತೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.