ಕ್ಷುಲ್ಲಕ ಕಾರಣಕ್ಕೆ ಇಬ್ಬರ ಮಧ್ಯೆ ಗಲಾಟೆ| ರವಿ ಮುದ್ದಿನಕೇರಿ ಮೇಲೆ ಮಾರಣಾಂತಿಕ ದಾಳಿ ನಡೆಸಿ ರವಿ ಎದೆಗೆ ಗುದ್ದಿಗುದ್ದಿ ಗಾಯಗೊಳಿಸಿದ್ದ ವಿಜಯ್| ಈ ಬಗ್ಗೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು|
ಹುಬ್ಬಳ್ಳಿ(ಜ.21): ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ಒಬ್ಬ ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾದ ಘಟನೆ ಇಲ್ಲಿಯ ಗಿರಿಣಿಚಾಳದಲ್ಲಿ ಬುಧವಾರ ನಡೆದಿದೆ.
ಗಿರಣಿಚಾಳದ ನಿವಾಸಿ ರವಿ ಮುದ್ದಿನಕೇರಿ(35) ಹಲ್ಲೆಗೊಳಗಾಗಿ ಮೃತಪಟ್ಟ ವ್ಯಕ್ತಿ. ಮಂಗಳವಾರ ಕ್ಷುಲ್ಲಕ ಕಾರಣಕ್ಕೆ ಅದೇ ಪ್ರದೇಶದ ವಿಜಯ ಎಂಬಾತನ ಮಧ್ಯೆ ಜಗಳ ನಡೆದಿದೆ. ಈ ವೇಳೆ ವಿಜಯ್ ಮಾರಣಾಂತಿಕ ದಾಳಿ ನಡೆಸಿ ರವಿ ಎದೆಗೆ ಗುದ್ದಿಗುದ್ದಿ ಗಾಯಗೊಳಿಸಿದ್ದರು.
ಬೆಳಗಾವಿ: ಆಸ್ತಿ ವಿವಾದಕ್ಕೆ ಏನೂ ಅರಿಯದ ನಾಲ್ಕು ವರ್ಷದ ಬಾಲಕ ಬಲಿ
ತಕ್ಷಣವೇ ಚಿಕಿತ್ಸೆಗೆ ಕಿಮ್ಸ್ಗೆ ದಾಖಲಿಸಲಾಗಿತ್ತು.ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯನನ್ನು ಪಿಐ ರವಿಚಂದ್ರ ಬಡಫಕ್ಕೀರಪ್ಪನವರ ನೇತೃತ್ವದ ತಂಡ ಬಂಧಿಸಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Jan 21, 2021, 10:57 AM IST