ನಾಲ್ಕು ವರ್ಷದ ಬಾಲಕನ ಕೊಲೆ| ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹಾರೂಗೊಪ್ಪ ಗ್ರಾಮದಲ್ಲಿ ನಡೆದ ಘಟನೆ| ಮಾರಕಾಸ್ತ್ರಗಳಿಂದ ಕೊಚ್ಚಿ ಬಾಲಕನ ಕೊಲೆ ಮಾಡಿದ ಆರೋಪಿ|  

ಬೆಳಗಾವಿ(ಜ.20): ಆಸ್ತಿ ವಿವಾದ ಹಿನ್ನೆಲೆಯಲ್ಲಿ ನಾಲ್ಕು ವರ್ಷದ ಬಾಲಕನನ್ನ ಕೊಚ್ಚಿ ಕೊಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಹಾರೂಗೊಪ್ಪ ಗ್ರಾಮದಲ್ಲಿ ಇಂದು(ಬುಧವಾರ) ನಡೆದಿದೆ. 

Add Asianetnews Kannada as a Preferred SourcegooglePreferred

ಮಾರುತಿ ಸಂಕಣ್ಣವರ್ (4) ಕೊಲೆಯಾದ ದುರ್ದೈವಿ ಬಾಲಕನಗಿದ್ದಾನೆ. ಇಂದು ಬೆಳ್ಳಂಬೆಳಗ್ಗೆ ಸಂಬಂಧಿಯಿಂದಲೇ ಬಾಲಕನ ಕೊಲೆಯಾಗಿದೆ ಎಂದು ತಿಳಿದು ಬಂದಿದೆ. 

ಬೆಂಗಳೂರು; ಆಸ್ತಿಗಾಗಿ ತಾಯಿ ಕುತ್ತಿಗೆ ಸೀಳಿದ ಪಾಪಿ ಮಗ ಗೋಪಿ!

ಆರೋಪಿ ಈರಪ್ಪಾ ಸಂಕಣ್ಣವರ್ (35) ಎಂಬಾತನೇ ಮಾರಕಾಸ್ತ್ರಗಳಿಂದ ಕೊಚ್ಚಿ ಬಾಲಕನನ್ನ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.