ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನೇ ಕೊಲೆ ಮಾಡಿದ ಪತ್ನಿ: ಆರೋಪ| ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ನಡೆದ ಘಟನೆ| ಈ ಸಂಬಂಧ ಧಾರವಾಡ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ದೂರು ದಾಖಲು| 

ಧಾರವಾಡ(ಸೆ.04): ಪ್ರಿಯಕರನ ಜೊತೆ ಸೇರಿಕೊಂಡು ಪತಿಯನ್ನೇ ಕೊಲೆ ಮಾಡಿರುವ ಆರೋಪವೊಂದು ಕೇಳಿ ಬಂದಿದೆ. ಹೌದು, ಪಿರಸಾಬ್ ನದಾಪ್(38) ಎಂಬಾತನೇ ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಈ ಘಟನೆ ನಡೆದಿರೋದು ತಾಲೂಕಿನ ನರೇಂದ್ರ ಗ್ರಾಮದಲ್ಲಿ. 

Add Asianetnews Kannada as a Preferred SourcegooglePreferred

ಧಾರವಾಡ ತಾಲೂಕಿನ ನರೇಂದ್ರ ಗ್ರಾಮದ ಪಿರಸಾಬ್ ನದಾಪ್ ಎಂಬ ವ್ಯಕ್ತಿ ಕಳೆದ ಒಂಬತ್ತು ದಿನದಿಂದ ಕಾಣೆಯಾಗಿದ್ದ. ಮನೆಗೆ ಬಾರದ ಹಿನ್ನಲೆಯಲ್ಲಿ ಧಾರವಾಡ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ರೋಷನ್ ಬಿ ಎಂಬ ಮಹಿಳೆ ಮಿಸ್ಸಿಂಗ್ ದೂರು ದಾಖಲಿಸಿದ್ದರು. 

ಯಾದಗಿರಿ: ತಮಟೆ ವಾಪಸ್‌ ಕೇಳಿದ್ದಕ್ಕೆ ಕೊಂದೇ ಬಿಟ್ರು..!

ಪಿರಸಾಬ್ ನದಾಪ್ ಪತ್ನಿ ತನ್ನ ಪ್ರಿಯಕರ ಸೋಮಯ್ಯ ಪೂಜಾರ ಎಂಬಾತನ ಜೊತೆ ಸೇರಿಕೊಂಡು ಗಂಡನನ್ನೇ ಕೊಲೆ ಮಾಡಿದ್ದಾಳೆ ಎಂದು ರೋಷನ್ ಬಿ ತಮ್ಮ ದೂರಿನಲ್ಲಿ ಗಂಭೀರವಾಗಿ ಆರೋಪಿಸಿದ್ದಾರೆ. ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆ ಪತಿಯನ್ನೇ ಕೊಲೆ ಮಾಡಿಸಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಗ್ರಾಮಸ್ಥರು ಇಂತಹ ಘಟನೆ ಆಗಬಾರದು ಎಂದು ಹೇಳಿದ್ದಾರೆ.