ಬಿಡಿಸಿಸಿ ಬ್ಯಾಂಕಿನಲ್ಲಿ ಪಿಗ್ಮಿ ಸಂಗ್ರಹಕಾರನಾಗಿ ಕಾರ್ಯ ನಿರ್ವಹಿಸುತಿದ್ದವನ ಕೊಲೆ| ಬಾಗಲಕೋಟೆ ಇಳಕಲ್ಲನಲ್ಲಿ ನಡೆದ ಘಟನೆ| ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ| 

ಇಳಕಲ್ಲ(ಅ.29): ನಗರದ ಹುಚನೂರ ಕ್ರಾಸ್‌ ಹತ್ತಿರ ವ್ಯಕ್ತಿಯೋರ್ವನ ಕೊಲೆ ಮಾಡಿದ ಘಟನೆ ಬುಧವಾರ ಸಂಭವಿಸಿದೆ. ನಗರದ ನಿವಾಸಿ, ಮೂಲತಃ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಬಸವರಾಜ ದೊಡ್ಡಪ್ಪ ಬಿರಾದಾರ (42) ಕೊಲೆಗೀಡಾದ ದುರ್ದೈವಿ. 

Add Asianetnews Kannada as a Preferred SourcegooglePreferred

ಈತ ಇಳಕಲ್ಲ ನಗರದ ಬಿಡಿಸಿಸಿ ಬ್ಯಾಂಕಿನಲ್ಲಿ ಪಿಗ್ಮಿ ಸಂಗ್ರಹಕಾರನಾಗಿ ಕಾರ್ಯ ನಿರ್ವಹಿಸುತಿದ್ದನು ಎಂದು ತಿಳಿದು ಬಂದಿದೆ. ವ್ಯಕ್ತಿ ಕೊಲೆ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. 

ಬೆಂಗಳೂರಿನಲ್ಲಿ ಕೊಲೆ, ಉತ್ತರ ಪ್ರದೇಶದಲ್ಲಿ ಹಂತಕ: ಡಿಎನ್‌ಎ ಟೆಸ್ಟ್‌ನಿಂದ ಸುಳಿವು!

ಘಟನಾ ಸ್ಥಳಕ್ಕೆ ಬಾಗಲಕೋಟೆ ಎಸ್ಪಿ ಜಗಲಾಸರ್‌, ಸಿಪಿಐ ಅಯ್ಯನಗೌಡ, ನಗರ ಪಿಎಸ್‌ಐ ರಮೇಶ ಜಲಗೇರಿ ಭೇಟಿ ನೀಡಿ ಪರಿಶೀಲಿಸಿದರು. ಈ ಕುರಿತು ಇಳಕಲ್ಲ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.