Asianet Suvarna News Asianet Suvarna News

ಸಿನಿಮೀಯ ರೀತಿಯಲ್ಲಿ ನಡೀತು ಮರ್ಡರ್: ಮಳೆ ನಡುವೆಯೇ ನಡೆದೇ ಹೋಯ್ತು ಭೀಕರ ಕೊಲೆ..!

ಮಳೆ ನೀರಿನ ಜೊತೆಗೆ ಹೊಳೆಯಾಗಿ ಹರಿತು ನೆತ್ತರು| ಚೌಡೇಶ್ವರಿ ನಗರ ಬಸ್ ನಿಲ್ದಾಣದಲ್ಲೇ ರುಂಡ ಚಂಡಾಡಿದ ಕಿರಾತಕರು| ಕಾರ್ಪೊರೇಟರ್ ಅಣ್ಣನ ಮಗನ ಕತ್ತು ಸೀಳಿದ ಹಂತಕರು| ವಾರ್ಡ್‌ ನಂಬರ್ 186 ಕಾರ್ಪರೇಟರ್ ಸೋಮಶೇಖರ್ ಅಣ್ಣನ ಮಗನ ಕೊಲೆ|

Person Murdered In Bengaluru
Author
Bengaluru, First Published Jul 9, 2020, 10:13 AM IST

ಬೆಂಗಳೂರು(ಜು.09): ಚಲಿಸುತ್ತಿದ್ದ ಕಾರಿನಿಂದ ಎಳೆದು ಕಾರ್ಪೊರೇಟರ್ ಅಣ್ಣನ ಮಗನನ್ನ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಚೌಡೇಶ್ವರಿ ನಗರ ಬಸ್ ನಿಲ್ದಾಣದ ಹತ್ತಿರ ನಡೆದಿದೆ. ವಾರ್ಡ್‌ ನಂಬರ್ 186 ಕಾರ್ಪರೇಟರ್ ಸೋಮಶೇಖರ್ ಅವರ ಅಣ್ಣನ ಮಗ ವಿನೋದ್ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. 

ಸಂಬಂಧಿಕರ ಮನೆಗೆ ತೆರಳಿ ವಿನೋದ್ ಕಾರಿನಲ್ಲಿ ವಾಪಸ್ಸಾಗುತ್ತಿದ್ದರು. ವಿನೋದ್ ಜೊತೆ ಕಾರಿನಲ್ಲಿ ಇಬ್ಬರು ಮಹಿಳಾ ಸಂಬಂಧಿಕರು ಕೂಡ ಇದ್ದರು. ಈ ವೇಳೆ ಚೌಡೇಶ್ವರಿ ನಗರ ಬಸ್ ನಿಲ್ದಾಣದ ಬಳಿ ಕಾರು ಬರುತ್ತಿದ್ದಂತೆ ಆಗಮಿಸಿದ ದುಷ್ಕರ್ಮಿಗಳು ತಂಡವೊಂದು ಚಲಿಸುತ್ತಿದ್ದ ಕಾರಿಂದ ವಿನೋದ್‌ನನ್ನ ಎಳೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ವೇಳೆ ಕಾರಿನ ಗಾಜು ಪುಡಿಪುಡಿಯಾಗಿದೆ. ಕುಟುಂಬಸ್ಥರ ಎದುರಲ್ಲೇ ವಿನೋದ್‌ ಪ್ರಾಣಪಕ್ಷಿ ಹಾರಿಹೋಗಿದೆ. ಇದರಿಂದ ಘಟನಾ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

17 ಗುಂಟೆ ಜಮೀನಿನ ವ್ಯಾಜ್ಯಕ್ಕೆ ಅಂಗವಿಕಲನ ಮರ್ಡರ್

ಕೊಲೆಯಾದ ವಿನೋದ್ ಅವರು ರಿಯಲ್ ಎಸ್ಟೇಟ್ ಮತ್ತು ಬ್ಯುಸಿನೆಸ್ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ. ಐದು ವರ್ಷದ ಹಿಂದಷ್ಟೇ ವಿನೋದ್ ವಿವಾಹವಾಹಿದ್ದರು. ವಿನೋದ್‌ಗೆ ಇಬ್ಬರು ಪುಟ್ಟ ಕಂದಮ್ಮಗಳಿದ್ದಾರೆ. 
ವಿನೋದ್‌ನನ್ನ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾದ ಆರೋಪಿಗಳನಮ್ನ ಹೆಡೆಮುರಿಕಟ್ಟಲು ರಾಮನಗರ ಎಸ್ಪಿ ರಾಮನಗರ ಎಸ್ಪಿ ಬಲೆ ಬೀಸಿದ್ದಾರೆ. ವಿನೋದ್‌ ಕೊಲೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow Us:
Download App:
  • android
  • ios