ಹಗರಿಬೊಮ್ಮನಹಳ್ಳಿಯ ಇಲಿಯಾಸ್ ಬಂಧಿತ ಆರೋಪಿ. 4 ಕಳ್ಳತನ ಪ್ರಕರಣಗಳಲ್ಲಿ ಆರೋಪಿ ಇಲಿಯಾಸ್‌ ಪೊಲೀಸರಿಗೆ ಬೇಕಾಗಿದ್ದ. ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾಗ ಆರೋಪಿ ಇಲಿಯಾಸ್ ಪರಾರಿಯಾಗಿದ್ದ. ಕಳೆದ 14 ವರ್ಷಗಳಿಂದ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೆಬ್ಬೂರು ಗ್ರಾಮದಲ್ಲಿ ವಾಸವಿದ್ದ, ಮದುವೆ ಮಾಡಿಕೊಂಡು ಹೆಂಡತಿ, ಮಕ್ಕಳ ಜೊತೆ ವಾಸವಿದ್ದ ಆರೋಪಿ.  

ವಿಜಯನಗರ(ಜು.25): ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು 14 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸುವ ಮೂಲಕ ಆರೋಪಿಯ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಗರಿಬೊಮ್ಮನಹಳ್ಳಿಯ ಇಲಿಯಾಸ್ ಬಂಧಿತ ಆರೋಪಿ. 4 ಕಳ್ಳತನ ಪ್ರಕರಣಗಳಲ್ಲಿ ಆರೋಪಿ ಇಲಿಯಾಸ್‌ ಪೊಲೀಸರಿಗೆ ಬೇಕಾಗಿದ್ದ. ವಿಚಾರಣೆಗಾಗಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾಗ ಆರೋಪಿ ಇಲಿಯಾಸ್ ಪರಾರಿಯಾಗಿದ್ದ. ಕಳೆದ 14 ವರ್ಷಗಳಿಂದ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೆಬ್ಬೂರು ಗ್ರಾಮದಲ್ಲಿ ವಾಸವಿದ್ದ, ಮದುವೆ ಮಾಡಿಕೊಂಡು ಹೆಂಡತಿ, ಮಕ್ಕಳ ಜೊತೆ ವಾಸವಿದ್ದ ಆರೋಪಿ. 

ಮೈಸೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ, ಪ್ರೇಮಿಗಳಿಬ್ಬೂರು ಆತ್ಮಹತ್ಯೆಗೆ ಶರಣು..!

ಆರೋಪಿ ಪತ್ತೆಗಾಗಿ ವಿಜಯನಗರ ಎಸ್ಪಿ ಶ್ರೀಹರಿಬಾಬು ಎರಡು ಪ್ರತ್ಯೇಕ ತಂಡಗಳನ್ನ ರಚಿಸಿದ್ದರು. ವೈಜ್ಞಾನಿಕ ತಂತ್ರಜ್ಞಾನಗಳನ್ನ ಬಳಸಿಕೊಂಡು ಸತತ ಕಾರ್ಯಾಚರಣೆ ಮೂಲಕ ಆರೋಪಿ ಪತ್ತೆ ಹಚ್ಚಿದ್ದಾರೆ ಪೊಲೀಸರು. ಸದ್ಯ ಆರೋಪಿಯನ್ನ ಬಂಧಿಸಿ ನ್ಯಾಯಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಪೊಲೀಸರು.