ಪ್ರಕರಣವೊಂದರ ಸ್ಥಳ ಮಹಜರು ಮಾಡಲು ರೌಡಿ ಶೀಟರ್‌ ಮನು ಎಂಬಾತನನ್ನು ಸ್ಥಳಕ್ಕೆ ಕರೆದೊಯ್ಯಲಾಗಿತ್ತು.  ಈ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ತುಮಕೂರು ನಗರ ಪೊಲೀಸ್ ಠಾಣೆ ಸಿಪಿಐ ದಿನೇಶ್ ಅವರು ರೌಡಿಶೀಟರ್ ಮನು ಕಾಲಿಗೆ ಗುಂಡು ಹಾರಿಸಿದ್ದಾರೆ. 

ತುಮಕೂರು(ಜು.26): ಪ್ರಕರಣವೊಂದರ ಸ್ಥಳ ಮಹಜರು ಮಾಡಲು ಸ್ಥಳಕ್ಕೆ ಕರೆದೊಯ್ದ ವೇಳೆ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್‌ ಮಾಡಿದ್ದಾರೆ. ಘಟನೆ ನಡೆದಿರೋದು ತುಮಕೂರು ನಗರದ ದಿಬ್ಬೂರು ಬಳಿ ಇಂದು(ಶುಕ್ರವಾರ) ನಡೆದಿದೆ. 

Add Asianetnews Kannada as a Preferred SourcegooglePreferred

ಪ್ರಕರಣವೊಂದರ ಸ್ಥಳ ಮಹಜರು ಮಾಡಲು ರೌಡಿ ಶೀಟರ್‌ ಮನು ಎಂಬಾತನನ್ನು ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಈ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ತುಮಕೂರು ನಗರ ಪೊಲೀಸ್ ಠಾಣೆ ಸಿಪಿಐ ದಿನೇಶ್ ಅವರು ರೌಡಿಶೀಟರ್ ಮನು ಕಾಲಿಗೆ ಗುಂಡು ಹಾರಿಸಿದ್ದಾರೆ. ಹೀಗಾಗಿ ರೌಡಿ ಶೀಟರ್ ಕಾಲಿಗೆ ಗುಂಡೇಟು ತಗುಲಿದೆ. ಘಟನೆಯಲ್ಲಿ ಪೊಲೀಸರೂ ಕೂಡ ಗಾಯಗೊಂಡಿದ್ದಾರೆ. 

ಚಿಕ್ಕಮಗಳೂರು: ಕಾಡು ಹಂದಿ ಬೇಟೆಗೆ ತೆರಳಿದ ಯುವಕರು, ಗುಂಡೇಟಿನಿಂದ ಓರ್ವ ಸಾವು..?

ಪೊಲೀಸರಿಗೆ ಶರಣಾಗುವಂತೆ ಸಿಪಿಐ ದಿನೇಶ್ ಅವರು ಎರಡು ಬಾರಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆದರೆ, ರೌಡಿ ಶೀಟರ್‌ ಮನು ಪೊಲೀಸರಿಗೆ ಶರಣಾಗದೇ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಯತ್ನಿಸಿದ್ದನು. ಈ ವೇಳೆ ಆತ್ಮರಕ್ಷಣೆಗಾಗಿ ರೌಡಿಶೀಟರ್ ಮನು ಕಾಲಿಗೆ ಗುಂಡು ಹೊಡೆದು ಪೊಲೀಸರು ಬಂಧಿಸಿದ್ದಾರೆ. ಗಾಯಾಳು ಪೊಲೀಸ್ ಸಿಬ್ಬಂದಿ ಹಾಗೂ ರೌಡಿಶೀಟರ್ ಮನುಗೆ ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.