*ಕಳ್ಳಭಟ್ಟಿ ಮಾರುತ್ತಿದ್ದ ಆರೋಪ ಅಂದರ್..!* ಲಾಕ್ ಡೌನ್ ಸಮಯವನ್ನೇ ಬಂಡವಾಳ ಮಾಡಿಕೊಂಡಿದ್ದ ಆರೋಪಿ*ಡಿವೈಎಸ್ ಪಿ ಶಿವಾನಂದ ಪವಾಡಶೆಟ್ಟಿ, ಗ್ರಾಮಾಂತರ ಪಿಎಸ್ ಐ ರವಿಕುಮಾರ್ ಕಪ್ಪತ್ತನವರ್ ನೇತೃತ್ವದಲ್ಲಿ ದಾಳಿ 

ಗದಗ, (ಜೂನ್.03): ಲಾಕ್ ಡೌನ್ ಸಮಯವನ್ನೇ ಬಂಡವಾಳ ಮಾಡಿಕೊಂಡು ಗದಗ ನಗರದ ಕೂಗಳತೆ ದೂರದ ಮಲ್ಲಸಮುದ್ರ ಗ್ರಾಮದ ಹೊರವಲಯದಲ್ಲಿ ಕಳ್ಳಭಟ್ಟಿ ತಯಾರಿಸುತ್ತಿದ್ದ ಘಟಕಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

Add Asianetnews Kannada as a Preferred SourcegooglePreferred

ಗದಗ ನಗರದ ಕೂಗಳತೆ ದೂರದ ಮಲ್ಲಸಮುದ್ರ ಗ್ರಾಮದ ಹೊರವಲಯದಲ್ಲಿ ನಡೀತಿದ್ದ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದು ಎಸ್ ಪಿ ಎನ್ ಯತೀಶ್ ನೇತೃತ್ವದಲ್ಲಿ ಖಾಕಿ ತಂಡದಿಂದ ದಾಳಿ ನಡೆದಿದೆ.

ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 114ಕ್ಕೇರಿಕೆ!

ಈ ವೇಳೆ ಕಳ್ಳಭಟ್ಟಿ ಸಂಗ್ರಹಿಸಿದ್ದ ರಾಜು ಮಾಂತೇಶ್ ಚೌವ್ಹಾಣ್ ಎನ್ನುವರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಧಾರವಾಡ ಜಿಲ್ಲೆಯ ಅಣ್ಣಿಗೇರಿ ಗ್ರಾಮದಿಂದ ಹೆಂಡ ತಂದು ಮಾರುತ್ತಿದ್ದ.

ಡಿವೈಎಸ್ ಪಿ ಶಿವಾನಂದ ಪವಾಡಶೆಟ್ಟಿ, ಗ್ರಾಮಾಂತರ ಪಿಎಸ್ ಐ ರವಿಕುಮಾರ್ ಕಪ್ಪತ್ತನವರ್ ಮತ್ತು ಅವರ ಸಿಬ್ಬಂದಿ ದಾಳಿ ಮಾಡಿದ್ದು,
ಆರೋಪಿಯಿಂದ 10 ಲೀಟರ್ ಕಳ್ಳಭಟ್ಟಿ ಸಾರಾಯಿ, ಸಾಮಾಗ್ರಿಗಳ ವಶ ಪಡೆದುಕೊಂಡಿದ್ದಾರೆ.