ಅಂಚೆ ಕಚೇರಿಯ ಹಿಂಬದಿಯ ಕಿಟಕಿಯ ಕಬ್ಬಿಣದ ಸರಳುಗಳನ್ನು ಮುರಿದು ಒಳನುಗ್ಗಿ ಕಳ್ಳತನ| ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣ| ಸಿಸಿ ಕ್ಯಾಮೆರಾಕ್ಕೆ ಬಟ್ಟೆ ಮುಸುಕು ಹಾಕಿ ಭದ್ರತೆಯ ಕೊಠಡಿಯಲ್ಲಿದ್ದ ಸೇಫ್ ಲಾಕರ್ ಒಡೆದು ಕಳ್ಳತನ|
ಕಲಘಟಗಿ(ಫೆ.17): ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಇರುವ ಅಂಚೆ ಕಚೇರಿಗೆ ಸೋಮವಾರ ತಡರಾತ್ರಿ ಕನ್ನ ಹಾಕಿದ ಖದೀಮರು 1.40 ಲಕ್ಷ ನಗದು ಹಾಗೂ ಸಿಸಿ ಕ್ಯಾಮೆರಾ ಡಿವಿಆರ್ ಕಳ್ಳತನ ಮಾಡಿದ್ದಾರೆ.
ಅಂಚೆ ಕಚೇರಿಯ ಹಿಂಬದಿಯ ಕಿಟಕಿಯ ಕಬ್ಬಿಣದ ಸರಳುಗಳನ್ನು ಮುರಿದು ಒಳನುಗ್ಗಿ ಈ ಕಳ್ಳತನ ಮಾಡಿದ್ದಾರೆ. ಸಿಸಿ ಕ್ಯಾಮೆರಾಕ್ಕೆ ಬಟ್ಟೆ ಮುಸುಕು ಹಾಕಿ ಭದ್ರತೆಯ ಕೊಠಡಿಯಲ್ಲಿದ್ದ ಸೇಫ್ ಲಾಕರ್ ಒಡೆದು ಈ ಕಳ್ಳತನ ನಡೆಸಿದ್ದಾರೆ. ಜತೆಗೆ ಸುಳಿವು ಬಿಡಬಾರದೆಂದು ಸಿಸಿ ಟಿವಿ ಡಿವಿಆರ್ ಸಹ ಕದ್ದೊಯ್ದಿದ್ದಾರೆ.
ಪೊಲೀಸ್ ಠಾಣೆ ಪಕ್ಕದಲ್ಲೇ ವಾಸವಿದ್ದ ಎಟಿಎಂ ಕಳ್ಳ..!
ಈ ವಿಷಯ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಜಿಲ್ಲಾ ಉಪಪೊಲೀಸ್ ವರಿಷ್ಠಾಧಿಕಾರಿ ರಾಮನಗೌಡ ಹಟ್ಟಿಹಾಗೂ ಅಂಚೆ ಕಚೇರಿಯ ಮೇಲಧಿಕಾರಿಗಳು ಬಂದು ಪರಿಶೀಲಿಸಿದರು. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಪಿಐ ಪ್ರಭು ಸೂರಿನ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 17, 2021, 10:05 AM IST