ಬೆಂಗಳೂರು: ದೂರು ಕೊಡಲು ಬಂದವಳ ಜತೆಗೆ ಪೊಲೀಸಪ್ಪನ ಅನುಚಿತ ವರ್ತನೆ?
ಘಟನೆಯಿಂದ ನಾನು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದೇನೆ. ಈ ಬಗ್ಗೆ ನಾನು ಏನು ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ. ಈ ಸಂದರ್ಭವನ್ನು ನಾನು ಹೇಗೆ ನಿಭಾಯಿಸಬೇಕು ಎಂಬುದು ಹೊಳೆಯುತ್ತಿಲ್ಲ. ಈ ಬಗ್ಗೆ ಸಲಹೆ ನೀಡಿ ಅಂತ ಟ್ವಿಟರ್ನಲ್ಲಿ ಮನವಿ ಮಾಡಿದ ಮಹಿಳೆ.
ಬೆಂಗಳೂರು(ಏ.11): ಸ್ನೇಹಿತರ ವಿವಾಹ ವಿಚ್ಛೇದನ ಪ್ರಕರಣದಲ್ಲಿ ಹೇಳಿಕೆ ನೀಡಲು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಗೆ ತೆರಳಿದ್ದ ಮಹಿಳೆ ಜತೆಗೆ ಸಬ್ ಇನ್ಸ್ಪೆಕ್ಟರ್(ಪಿಎಸ್ಐ) ಅನುಚಿತವಾಗಿ ವರ್ತಿಸಿದ ಆರೋಪ ಕೇಳಿ ಬಂದಿದೆ.
ಸುದ್ದಗುಂಟೆಪಾಳ್ಯ ಠಾಣೆ ಪಿಎಸ್ಐ ಮಂಜುನಾಥ ವಿರುದ್ಧ ಮಹಿಳೆ ಅನುಚಿತ ವರ್ತನೆ ಆರೋಪ ಮಾಡಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ ಬರೆದು ನಗರ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿದ್ದಾರೆ. ‘ಸ್ನೇಹಿತರ ವಿವಾಹ ವಿಚ್ಛೇದನ ಪ್ರಕರಣ ಸಂಬಂಧ ಹೇಳಿಕೆ ದಾಖಲಿಸಲು ಏ.8ರಂದು ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಗೆ ತೆರಳಿದ್ದೆ. ಈ ವೇಳೆ ಪಿಎಸ್ಐ ಮಂಜುನಾಥ ಅವರು ಹೇಳಿಕೆ ದಾಖಲಿಸುವ ನೆಪದಲ್ಲಿ ನನ್ನ ಕೈ, ಸೊಂಟ ಮುಟ್ಟಿ ಅಸಭ್ಯವಾಗಿ ವರ್ತಿಸಿದರು. ಅಷ್ಟೇ ಅಲ್ಲದೆ, ತಡರಾತ್ರಿ ವಾಟ್ಸಾಪ್ನಲ್ಲಿ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ಬೆಂಗಳೂರು: ಕಳ್ಳನೆಂದು ಭಾವಿಸಿ ಪೈಶಾಚಿಕವಾಗಿ ವ್ಯಕ್ತಿಯ ಹತ್ಯೆ
‘ಈ ಘಟನೆಯಿಂದ ನಾನು ಮಾನಸಿಕವಾಗಿ ಆಘಾತಕ್ಕೆ ಒಳಗಾಗಿದ್ದೇನೆ. ಈ ಬಗ್ಗೆ ನಾನು ಏನು ಮಾಡಬೇಕು ಎಂಬುದು ಗೊತ್ತಾಗುತ್ತಿಲ್ಲ. ಈ ಸಂದರ್ಭವನ್ನು ನಾನು ಹೇಗೆ ನಿಭಾಯಿಸಬೇಕು ಎಂಬುದು ಹೊಳೆಯುತ್ತಿಲ್ಲ. ಈ ಬಗ್ಗೆ ಸಲಹೆ ನೀಡಿ’ ಆ ಮಹಿಳೆ ಟ್ವಿಟರ್ನಲ್ಲಿ ಮನವಿ ಮಾಡಿದ್ದಾರೆ.