Asianet Suvarna News Asianet Suvarna News

ತೀರ್ಥಹಳ್ಳಿ: ರಾಮೇಶ್ವರಂ ಕೆಫೆ ಸ್ಫೋಟದ ಮಾಸ್ಟರ್‌ ಮೈಂಡ್‌ ತಾಹ ನಿವೃತ್ತ ಯೋಧರ ಪುತ್ರ..!

ಕಲಿಕೆಯಲ್ಲೂ ನಿಪುಣನಾಗಿದ್ದ ಅಬ್ದುಲ್‌ ಮತೀನ್‌ ತಾಹ ಪ್ರೌಢ ಶಿಕ್ಷಣದ ಬಳಿಕ ಬೆಂಗಳೂರಿಗೆ ತೆರಳಿ ಅಲ್ಲಿ ಎಂಜಿನಿಯರಿಂಗ್ ಶಿಕ್ಷಣ ಪೂರೈಸಿದ್ದ. ಸಂದರ್ಭದಲ್ಲಿಯೇ ಉಗ್ರರ ನೆರಳಿಗೆ ಸಿಲುಕಿದ್ದ ಎನ್ನಲಾಗಿದೆ. ಮೀನು ಮಾರ್ಕೆಟ್ ಬಳಿಯೇ ಈತನ ಮನೆ ಇದ್ದು, ಒಬ್ಬನೇ ಪುತ್ರ. ಸಮಾಜದಲ್ಲಿ ಇವರ ಕುಟುಂಬ ಒಳ್ಳೆಯ ಹೆಸರು ಇಟ್ಟುಕೊಂಡಿತ್ತು. ತಂದೆ ಒಂದು ವರ್ಷದ ಹಿಂದಷ್ಟೇ ತೀರಿಕೊಂಡಿದ್ದು, ತಾಯಿಯ ಬಗ್ಗೆ ಕೂಡ ಒಳ್ಳೆಯ ಅಭಿಪ್ರಾಯವಿದೆ.
 

Rameshwaram Cafe Blast Mastermind Abdul Mateen Taha son of Retired Soldier grg
Author
First Published Apr 13, 2024, 11:17 AM IST

ತೀರ್ಥಹಳ್ಳಿ(ಏ.13):  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಪಶ್ಚಿಮ ಬಂಗಾಳದಲ್ಲಿ ಬಂಧಿತ ಶಂಕಿತ ಉಗ್ರರಲ್ಲಿ ಒಬ್ಬನಾದ ಅಬ್ದುಲ್‌ ಮತೀನ್‌ ತಾಹ ನಿವೃತ್ತ ಯೋಧರ ಪುತ್ರ ಎಂಬುದು ಬೇಸರದ ಸಂಗತಿ. ಎಂಜಿನಿಯರಿಂಗ್ ಪದವೀಧರನಾಗಿದ್ದು, ಪ್ರೌಢಶಾಲೆಯವರೆಗೆ ತೀರ್ಥಹಳ್ಳಿಯಲ್ಲಿಯೇ ಓದಿದ್ದ ತಾಹ ಅತ್ಯಂತ ಚುರುಕು ಮತ್ತು ಮೃದು ಸ್ವಭಾವದ ವ್ಯಕ್ತಿಯಾಗಿದ್ದ ಎಂದು ಬಲ್ಲವರು ಹೇಳುತ್ತಾರೆ.

ಕಲಿಕೆಯಲ್ಲೂ ನಿಪುಣನಾಗಿದ್ದ ಈತ ಪ್ರೌಢ ಶಿಕ್ಷಣದ ಬಳಿಕ ಬೆಂಗಳೂರಿಗೆ ತೆರಳಿ ಅಲ್ಲಿ ಎಂಜಿನಿಯರಿಂಗ್ ಶಿಕ್ಷಣ ಪೂರೈಸಿದ್ದ. ಸಂದರ್ಭದಲ್ಲಿಯೇ ಉಗ್ರರ ನೆರಳಿಗೆ ಸಿಲುಕಿದ್ದ ಎನ್ನಲಾಗಿದೆ. ಮೀನು ಮಾರ್ಕೆಟ್ ಬಳಿಯೇ ಈತನ ಮನೆ ಇದ್ದು, ಒಬ್ಬನೇ ಪುತ್ರ. ಸಮಾಜದಲ್ಲಿ ಇವರ ಕುಟುಂಬ ಒಳ್ಳೆಯ ಹೆಸರು ಇಟ್ಟುಕೊಂಡಿತ್ತು. ತಂದೆ ಒಂದು ವರ್ಷದ ಹಿಂದಷ್ಟೇ ತೀರಿಕೊಂಡಿದ್ದು, ತಾಯಿಯ ಬಗ್ಗೆ ಕೂಡ ಒಳ್ಳೆಯ ಅಭಿಪ್ರಾಯವಿದೆ.

Rameshwaram Cafe Blast: ರಾಮೇಶ್ವರಂ ಕೆಫೆಗೆ ಬಾಂಬ್ ಇಟ್ಟ ಉಗ್ರನ ಬಂಧನ: ಉ. ಭಾರತದಲ್ಲಿ ಅರೆಸ್ಟ್‌ ಮಾಡಿದ NIA ಅಧಿಕಾರಿಗಳು

ಏಕಾಂಗಿಯಾಗಿರುತ್ತಿದ್ದ ಮುಸಾವಿರ್ ಸಾಜಿದ್ ಹುಸೇನ್

ತೀರ್ಥಹಳ್ಳಿ: ಮಧ್ಯಮ ವರ್ಗದ ಕುಟುಂಬದ ಹಿನ್ನೆಲೆ ಹೊಂದಿರುವ ಮುಸಾವಿರ್ ಸಾಜಿದ್ ಹುಸೇನ್ ಬಗ್ಗೆ ಸ್ಥಳೀಯರಿಗೆ ಗೊತ್ತಿರುವುದೇ ಕಡಿಮೆ. ಮುಜಾವಿರ್‌ ಅಕ್ಕಪಕ್ಕದವರೊಂದಿಗಾಗಲಿ, ಕುಟುಂಬದವರೊಂದಿಗೆ ಸೇರಿ ಯಾರ ಜತೆಗೂ ಹೆಚ್ಚು ಬೆರೆಯದೆ ತನ್ನದೇ ಲೋಕದಲ್ಲಿರುತ್ತಿದ್ದ ಎನ್ನಲಾಗಿದೆ. 

ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿರುವ ಈತನ ಮನೆಯಲ್ಲಿ ತಾಯಿ ಮಾತ್ರ ಇದ್ದಾರೆ. ತಂದೆ ಇಲ್ಲದ ಈತನಿಗೆ ಅಣ್ಣ ಮತ್ತು ತಮ್ಮ ಇದ್ದಾರೆ. ಅಣ್ಣ ಬೇರೆ ಕಡೆ ವ್ಯವಹಾರ ಮಾಡಿಕೊಂಡಿದ್ದು, ಈತನ ಕುಟುಂಬಕ್ಕೆ ಕಟ್ಟಡ ಬಾಡಿಗೆಯೇ ಮೂಲ ಆದಾಯ. ಮುಸ್ಲಿಂ ಉದ್ದನೆಯ ನಿಲುವಂಗಿ ಧರಿಸಿ, ಮನೆ ಮಹಡಿ ಮೇಲೆ ಮೊಬೈಲ್ ನೋಡುತ್ತಾ ಕೂರುತ್ತಿದ್ದ. ಉಳಿದ ವೇಳೆ ತನಗೆ ಅತ್ಯಂತ ಬೇಕಾದ ತನ್ನದೇ ಸಮುದಾಯದ ಒಂದೆರಡು ಸ್ಥಳಗಳಲ್ಲಿ ಮತ್ತು ಮಸೀದಿಯಲ್ಲಿರುತ್ತಿದ್ದ ಎಂದು ಹೇಳಲಾಗಿದೆ.

Follow Us:
Download App:
  • android
  • ios